ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.
ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.
ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…