ಚಿತ್ರ ಮಂಜರಿ

ಖ್ಯಾತ ನಟ ಶರತ್ ಬಾಬು ಅನಾರೋಗ್ಯದಿಂದ ವಿಧಿವಶ

ಹೈದರಾಬಾದ್ : ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ (ಮೇ 22) ಕೊನೆಯುಸಿರೆಳೆದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ, ಲಿವರ್ ಸೇರಿದಂತೆ ಅವರ ಅಂಗಾಂಗಗಳು ಬಾಧಿತವಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶರತ್ ಬಾಬು ಅವರನ್ನು ಮೊದಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದರು. ಮೇ 5 ರಂದು ಅವರು ನಿಧನ ಹೊಂದಿದ್ದರು ಎಂದು ಸುದ್ದಿಯಾಗಿತ್ತು.

73 ರ ಹರೆಯದ ಶರತ್‌ಬಾಬು ಸುಮಾರು 50 ವರ್ಷಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡ ತಮಿಳು, ತೆಲುಗು ಮತ್ತು ಇತರ ಭಾಷೆಗಳಲ್ಲಿ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಟ, ಪೋಷಕ ಪಾತ್ರಧಾರಿಯಾಗಿ ಸಿಕ್ಕ ಪಾತ್ರಗಳಲ್ಲೆಲ್ಲ ತಮ್ಮ ಛಾಪು ಮೂಡಿಸಿದ್ದಾರೆ.

ರಜನಿಕಾಂತ್ ಜತೆ ಮುಳ್ಳುಮ್ ಮಲರುಂ, ತ್ಲೆಕ್ಕರನ್, ಅಣ್ಣಾಮಲೈ ಮತ್ತು ಮುತ್ತು ಚಿತ್ರಗಳ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದ್ದರು. 1973 ರಲ್ಲಿ ತೆಲುಗು ಚಲನಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು ಮತ್ತು ನಂತರ ಕೆ. ಬಾಲಚಂದರ್ ನಿರ್ದೇಶನದ ತಮಿಳು ಚಲನಚಿತ್ರ ನಿಝಲ್ ನಿಜಮಗಿರದು (1978) ಮೂಲಕ ಜನಪ್ರಿಯರಾದರು.

ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಉಷಾ, ಅಮೃತ ವರ್ಷಿಣಿ, ಹೃದಯ ಹೃದಯ, ಓ ಪ್ರಿಯತಮ, ನಮ್ ಯಜಮಾನ್ರು ಅವರು ನಟಿಸಿದ ಕೆಲವು ಕನ್ನಡ ಚಿತ್ರಗಳಾಗಿವೆ.

ಶರತ್‌ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

33 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago