ಚಿತ್ರ ಮಂಜರಿ

ಬಂಗಾಲಿಯ ಖ್ಯಾತ ನಟಿ  ಐಂದ್ರಿಲಾ ಶರ್ಮಾ ಇನ್ನಿಲ್ಲ

ಬಂಗಾಲಿಯ ಖ್ಯಾತ ನಟಿ  ಐಂದ್ರಿಲಾ ಶರ್ಮಾ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ (ನವೆಂಬರ್ 20) ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ನವೆಂಬರ್ 20) ಮಧ್ಯಾಹ್ನ ಕೊನೆಯುಸಿರೆಳೆದರು. ಐಂದ್ರಿಲಾ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ನಿಧನರಾಧರು ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ಐಂದ್ರಿಲಾಶರ್ಮಾ ಬಾಯ್ ಫ್ರೆಂಡ್ ವದಂತಿಯನ್ನು ತಳ್ಳಿ ಹಾಕಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಿಪಿಆರ್ ಮಾಡಲಾಯಿತು. ಆದರೆ  ಐಂದ್ರಿಲಾ ದೇಹ ಸ್ಪಂದಿಸಲಿಲ್ಲ. ಹಾಗಾಗಿ ಅವರನ್ನು ವೆಂಟಿಲೇಟರ್ ಬೆಂಬಲಕ್ಕೆ ಇರಿಸಲಾಯಿತು. ಅಂಡ್ರಿಲಾ ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಐಂದ್ರಿಲಾ ಇನ್ನಿಲ್ಲ

ಐಂದ್ರಿಲಾ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬಂಗಾಲಿ ಕಿರುತೆರೆ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ. ಅಂದಹಾಗೆ ನಟಿ ಐಂದ್ರಿಲಾ ಕ್ಯಾನ್ಸರ್‌ ರೋಗಕ್ಕೆ ಒಳಗಾಗಿದ್ದರು. ಇತ್ತೀಚಿಗಷ್ಟೆ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದರು. ಕ್ಯಾನ್ಸರ್ ಗೆದ್ದ ನಟಿ ಮತ್ತೆ ಬಣ್ಣ ಹಚ್ಚಲು ಸ್ಜಜಾಗಿದ್ದರು. ಆದರೆ ವಿಧಿ ಆಟವೇ ಬೇರೆಯಾಗಿತ್ತು ಕ್ಯಾನ್ಸರ್ ನಿಂದ ಗುಣಮುಖರಾಗುತ್ತಿದ್ದಂತೆ  ಅಂಡ್ರಿಯಾ ಬ್ರೈನ್ ಸ್ಟ್ರೋಕ್‌ಗೆ ಒಳಗಾದರು. ಮತ್ತೆ ಐಂದ್ರಿಲಾ ಆಸ್ಪತ್ರೆಗೆ ದಾಖಲಾದರು. ಎರಡೂ ಕಾಯಿಲೆಯಿಂದ ಸುಧಾರಿಸಿಕೊಂಡಿದ್ದ ಅಂಡ್ರಿಯಾ ಇದೀಗ ಹೃದಯಾಘಾತಕ್ಕೆ ಬಲಿಯಾದರು.

ಐಂದ್ರಿಲಾ ಬಂಗಾಲಿಯಲ್ಲಿ ತುಂಬಾ ಪ್ರಸಿದ್ಧ ನಟಿ. ‘ಜುಮುರ್’ ಟಿವಿ ಶೋ ಮೂಲಕ  ಶೋಬಿಜ್‌ಗೆ ಕಾಲಿಟ್ಟರು. ಬಳಿಕ ಅಂಡ್ರಿಲಾ ‘ಜಿಯೋನ್ ಕತಿ’, ‘ಜಿಬೋನ್ ಜ್ಯೋತಿ’ ಸೇರಿದಂತೆ ಹಲವಾರು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು. ಧಾರಾವಾಹಿ ಜೊತೆಗೆ ವೆಬ್ ಸರಣಿಯಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ‘ಭಾಗರ್’ ವೆಬ್ ಸರಣಿಯನ್ನು ಮುಗಿಸಿದ್ದರು. ಬಳಿಕ ಅಂಡ್ರಿಯಾ ಸ್ಥಿತಿ ಗಂಭೀರವಾಗಿತ್ತು. ನಟಿ ಐಂದ್ರಿಲಾ ಶರ್ಮಾ ಚೇತರಿಸಿಕೊಳ್ಳಲಿ ಸಿನಿಮಾ ಗಣ್ಯರು ಮತ್ತು ಅಭಿಮಾನಿಗಳು ಪ್ರಾರ್ಥಿಸಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.

andolana

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

38 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

1 hour ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

1 hour ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

1 hour ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

1 hour ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago