ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ.
ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ (SK Bhagavan) ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು.
1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದೆ.
ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…