ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ.
ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ (SK Bhagavan) ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು.
1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದೆ.
ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…