ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲೇ ಉದ್ದವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫತೇರ್ ಪೇಕರ್ ಅವರ ಪುತ್ರ ಕೂಡ ಪಾಲ್ಗೊಂಡಿದ್ದರು. ಸೆಲ್ಫಿ ತಗೆಯುವ ವಿಚಾರವಾಗಿ ಗಲಾಟೆ ನಡೆದಿದೆ.
ಸೋನು ನಿಗಮ್ ಜೊತೆ ಸೆಲ್ಫಿಗಾಗಿ ಬಂದ ಶಾಸಕನ ಮಗನನ್ನು ಸೋನು ಅಂಗರಕ್ಷಕರು ತಳ್ಳಿದ್ದಾರೆ. ಈ ತಳ್ಳಾಟದಲ್ಲಿ ಶಾಸಕನ ಮಗನು ವೇದಿಕೆಯಿಂದ ಕೆಳಗೆ ಬಿದ್ದ ಎಂದು ಹೇಳಲಾಗುತ್ತಿದೆ. ರೊಚ್ಚಿಗೆದ್ದ ಹುಡುಗನು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದ ಸೋನು ನಿಗಮ್ ಅವರನ್ನು ಹಿಡಿದೆಳೆದಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸೋನು ನಿಗಮ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.
ಸೋನು ಬರೆದ ದೂರಿನಲ್ಲಿ ‘ನಾವು ಕಾರ್ಯಕ್ರಮ ಮುಗಿಸಿಕೊಂಡು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದೆವು. ಮೊದಲು ಆ ಹುಡುಗ ನನ್ನ ತಂಡದೊಂದಿಗೆ ಗಲಾಟೆಗೆ ಇಳಿದ. ತಳ್ಳಾಟ ಶುರುವಾಯಿತು. ನನ್ನನ್ನು ಆ ಹುಡುಗ ಕೋಪದಿಂದ ತಳ್ಳಿದ. ನಾನು ವೇದಿಕೆಯ ಮೆಟ್ಟಿಲುಗಳಿಂದ ಜಾರಿದೆ’ ಎಂದು ಬರೆದಿದ್ದಾರೆ. ಸದ್ಯ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…