ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲೇ ಉದ್ದವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫತೇರ್ ಪೇಕರ್ ಅವರ ಪುತ್ರ ಕೂಡ ಪಾಲ್ಗೊಂಡಿದ್ದರು. ಸೆಲ್ಫಿ ತಗೆಯುವ ವಿಚಾರವಾಗಿ ಗಲಾಟೆ ನಡೆದಿದೆ.
ಸೋನು ನಿಗಮ್ ಜೊತೆ ಸೆಲ್ಫಿಗಾಗಿ ಬಂದ ಶಾಸಕನ ಮಗನನ್ನು ಸೋನು ಅಂಗರಕ್ಷಕರು ತಳ್ಳಿದ್ದಾರೆ. ಈ ತಳ್ಳಾಟದಲ್ಲಿ ಶಾಸಕನ ಮಗನು ವೇದಿಕೆಯಿಂದ ಕೆಳಗೆ ಬಿದ್ದ ಎಂದು ಹೇಳಲಾಗುತ್ತಿದೆ. ರೊಚ್ಚಿಗೆದ್ದ ಹುಡುಗನು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದ ಸೋನು ನಿಗಮ್ ಅವರನ್ನು ಹಿಡಿದೆಳೆದಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸೋನು ನಿಗಮ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.
ಸೋನು ಬರೆದ ದೂರಿನಲ್ಲಿ ‘ನಾವು ಕಾರ್ಯಕ್ರಮ ಮುಗಿಸಿಕೊಂಡು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದೆವು. ಮೊದಲು ಆ ಹುಡುಗ ನನ್ನ ತಂಡದೊಂದಿಗೆ ಗಲಾಟೆಗೆ ಇಳಿದ. ತಳ್ಳಾಟ ಶುರುವಾಯಿತು. ನನ್ನನ್ನು ಆ ಹುಡುಗ ಕೋಪದಿಂದ ತಳ್ಳಿದ. ನಾನು ವೇದಿಕೆಯ ಮೆಟ್ಟಿಲುಗಳಿಂದ ಜಾರಿದೆ’ ಎಂದು ಬರೆದಿದ್ದಾರೆ. ಸದ್ಯ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…