ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲೇ ಉದ್ದವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫತೇರ್ ಪೇಕರ್ ಅವರ ಪುತ್ರ ಕೂಡ ಪಾಲ್ಗೊಂಡಿದ್ದರು. ಸೆಲ್ಫಿ ತಗೆಯುವ ವಿಚಾರವಾಗಿ ಗಲಾಟೆ ನಡೆದಿದೆ.
ಸೋನು ನಿಗಮ್ ಜೊತೆ ಸೆಲ್ಫಿಗಾಗಿ ಬಂದ ಶಾಸಕನ ಮಗನನ್ನು ಸೋನು ಅಂಗರಕ್ಷಕರು ತಳ್ಳಿದ್ದಾರೆ. ಈ ತಳ್ಳಾಟದಲ್ಲಿ ಶಾಸಕನ ಮಗನು ವೇದಿಕೆಯಿಂದ ಕೆಳಗೆ ಬಿದ್ದ ಎಂದು ಹೇಳಲಾಗುತ್ತಿದೆ. ರೊಚ್ಚಿಗೆದ್ದ ಹುಡುಗನು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದ ಸೋನು ನಿಗಮ್ ಅವರನ್ನು ಹಿಡಿದೆಳೆದಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸೋನು ನಿಗಮ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.
ಸೋನು ಬರೆದ ದೂರಿನಲ್ಲಿ ‘ನಾವು ಕಾರ್ಯಕ್ರಮ ಮುಗಿಸಿಕೊಂಡು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದೆವು. ಮೊದಲು ಆ ಹುಡುಗ ನನ್ನ ತಂಡದೊಂದಿಗೆ ಗಲಾಟೆಗೆ ಇಳಿದ. ತಳ್ಳಾಟ ಶುರುವಾಯಿತು. ನನ್ನನ್ನು ಆ ಹುಡುಗ ಕೋಪದಿಂದ ತಳ್ಳಿದ. ನಾನು ವೇದಿಕೆಯ ಮೆಟ್ಟಿಲುಗಳಿಂದ ಜಾರಿದೆ’ ಎಂದು ಬರೆದಿದ್ದಾರೆ. ಸದ್ಯ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…