ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ ಆರ್ ಮಯಿಲ್ಸಾಮಿ (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ.
ವರದಿಗಳ ಪ್ರಕಾರ ಮಯಿಲ್ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದು, ಬಳಿಕ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಮಯಿಲ್ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಮತ್ತು ಅನೇಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಹಾಸ್ಯ ಕಾರ್ಯಕ್ರಮವೊಂದರ ನಿರೂಪಕ ಹಾಗೂ ತೀರ್ಪುಗಾರರಾಗಿ ಮೊದಲ ಬಾರಿಗೆ ಅವರು ದೂರದರ್ಶನಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 1984ಲ್ಲಿ ಬಿಡುಗಡೆಯಾದ ನಿರ್ಮಾಪಕ ಹಾಗೂ ನಟ ಕೆ ಭಾಗ್ಯರಾಜ್ ಅವರ ಚಿತ್ರ ಧವನಿ ಕನವುಗಲ್ ಮೂಲಕ ಹಾಸ್ಯ ನಟರಾಗಿ ತಮಿಳು ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮಯಿಲ್ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…