ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ ಆರ್ ಮಯಿಲ್ಸಾಮಿ (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ.
ವರದಿಗಳ ಪ್ರಕಾರ ಮಯಿಲ್ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದು, ಬಳಿಕ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಮಯಿಲ್ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಮತ್ತು ಅನೇಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಹಾಸ್ಯ ಕಾರ್ಯಕ್ರಮವೊಂದರ ನಿರೂಪಕ ಹಾಗೂ ತೀರ್ಪುಗಾರರಾಗಿ ಮೊದಲ ಬಾರಿಗೆ ಅವರು ದೂರದರ್ಶನಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 1984ಲ್ಲಿ ಬಿಡುಗಡೆಯಾದ ನಿರ್ಮಾಪಕ ಹಾಗೂ ನಟ ಕೆ ಭಾಗ್ಯರಾಜ್ ಅವರ ಚಿತ್ರ ಧವನಿ ಕನವುಗಲ್ ಮೂಲಕ ಹಾಸ್ಯ ನಟರಾಗಿ ತಮಿಳು ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮಯಿಲ್ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…