ಚಿತ್ರ ಮಂಜರಿ

ಚಲನಚಿತ್ರೋತ್ಸವ: ಮೊದಲ ದಿನ ‘ಪ್ರತಿಕ್ರಿಯೆ’ ಉತ್ತಮ

ಮೈಸೂರು: ನಗರದ ಐನೆಕ್ಸ್ ಹಾಗೂ ಡಿಆರ್‌ಸಿ ಚಿತ್ರಮಂದಿರಗಳಲ್ಲಿ ಮಂಗಳವಾರದಿಂದ ಪ್ರಾರಂಭವಾದ ದಸರಾ ಚಲನಚಿತ್ರೋತ್ಸವಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಐನೆಕ್ಸ್‌ನ ೨, ೩ ಮತ್ತು ೪ನೇ ಸ್ಕ್ರೀನ್‌ನಲ್ಲಿ ಚಿತ್ರಗಳ ಪ್ರದರ್ಶನಗೊಂಡರೆ, ಡಿಆರ್‌ಸಿಯ ಒಂದು ಸ್ಕ್ರೀನ್‌ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಐನೆಕ್ಸ್‌ನ ೨ನೇ ಸ್ಕ್ರೀನ್‌ನಲ್ಲಿ ಕನ್ನಡದ ಸಿನಿಮಾಗಳು, ೩ನೇ ಸ್ಕ್ರೀನ್‌ನಲ್ಲಿ ಭಾರತೀಯ ಸಿನಿಮಾಗಳು, ೪ನೇ ಸ್ಕ್ರೀನ್‌ನಲ್ಲಿ ವಿಶ್ವ ಸಿನಿಮಾಗಳು ಪ್ರದರ್ಶನವಾಗುತ್ತಿವೆ. ಡಿಆರ್‌ಸಿಯಲ್ಲಿ ಕನ್ನಡದ ಇತ್ತೀಚಿನ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.

೩ನೇ ಸ್ಕ್ರೀನ್‌ನಲ್ಲಿ ಪ್ರದರ್ಶನ ಕಂಡ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಯಿತು.
೪ನೇ ಸ್ಕ್ರೀನ್‌ನಲ್ಲಿ ಪ್ರದರ್ಶನಗೊಂಡ ವಿಟ್ಟೂರೊ ಡೆ ಸಿಕಾ ನಿರ್ದೇಶನದ ಇಟಲಿ ಭಾಷೆಯ ‘ಬೈಸಿಕಲ್ ಥೀವ್ಸ್’(ಲಾಡ್ರಿ ಡಿ ಬೈಸಿಕಲ್ಲೆ) ಚಿತ್ರ ನೋಡುಗರ ಎದೆಯನ್ನು ಮೆತ್ತಗಾಗಿಸಿತು. ಇಟಲಿಯಲ್ಲಿ ಯುದ್ಧವಾದ ನಂತರದ ಜನಜೀವನದ ದುರಂತ ಬದುಕನ್ನು ಕಟ್ಟಿಕೊಡುವ ಈ ಚಿತ್ರ ಕಾಯಕ ಜೀವಿಯೊಬ್ಬನ ಬೈಸಿಕಲ್ ಕಳುವಾದ ಕಥೆ ಹೊಂದಿದೆ. ಆತನ ಮೂಲಕ ಸಾಮಾಜಿಕ, ಆರ್ಥಿಕ ಮುಗ್ಗಟ್ಟುಗಳ ದರ್ಶನವನ್ನು ಚಿತ್ರ ಮಾಡಿಸುತ್ತದೆ.

ನಾಳೆ ಪುನೀತ್ ಚಿತ್ರೋತ್ಸವ 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆಯ್ದ ಚಲನಚಿತ್ರಗಳನ್ನು ಒಂದು ದಿನ ಪ್ರದರ್ಶನ ಮಾಡುವ ಮೂಲಕ ಅವರಿಗೆ ಸಿನಿಮಾ ನಮನವನ್ನು ಅರ್ಪಿಸುವ ಕೆಲಸವನ್ನು ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಮಾಡುತ್ತಿದೆ.

ಶೇಷ್ಟ್ರ ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಗಳಿಸಿಕೊಂಡಿರುವ ‘ಬೆಟ್ಟದ ಹೂ’ ಚಿತ್ರದ ಮೂಲಕ ಉತ್ಸವ ಪ್ರಾರಂಭವಾಗಲಿದೆ. ಐನೆಕ್ಸ್‌ನಲ್ಲಿ ಬೆಟ್ಟದ ಹೂ, ರಾಜಕುಮಾರ, ರಣವಿಕ್ರಮ, ಯುವರತ್ನ ಪ್ರದರ್ಶನಗೊಂಡರೆ, ಡಿಆರ್‌ಸಿಯಲ್ಲಿ ಬೆಟ್ಟದ ಹೂವು, ಯುವರತ್ನ, ಪೃಥ್ವಿ, ಅಂಜನೀ ಪುತ್ರ ಪ್ರದರ್ಶನಗೊಳ್ಳಲಿವೆ.
ಅಶ್ವಿನಿ ಪುನೀತ್ ರಾಜಕುಮಾರ್ ಅವರು ಐನೆಕ್ಸ್‌ನಲ್ಲಿ ಬೆಳಿಗ್ಗೆ ೧೦ಕ್ಕೆ ಚಿತ್ರೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ. ಶಕ್ತಿಧಾಮದ ಮಕ್ಕಳ ಜತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago