ಚಿತ್ರ ಮಂಜರಿ

ಚಲನಚಿತ್ರೋತ್ಸವ: ಮೊದಲ ದಿನ ‘ಪ್ರತಿಕ್ರಿಯೆ’ ಉತ್ತಮ

ಮೈಸೂರು: ನಗರದ ಐನೆಕ್ಸ್ ಹಾಗೂ ಡಿಆರ್‌ಸಿ ಚಿತ್ರಮಂದಿರಗಳಲ್ಲಿ ಮಂಗಳವಾರದಿಂದ ಪ್ರಾರಂಭವಾದ ದಸರಾ ಚಲನಚಿತ್ರೋತ್ಸವಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಐನೆಕ್ಸ್‌ನ ೨, ೩ ಮತ್ತು ೪ನೇ ಸ್ಕ್ರೀನ್‌ನಲ್ಲಿ ಚಿತ್ರಗಳ ಪ್ರದರ್ಶನಗೊಂಡರೆ, ಡಿಆರ್‌ಸಿಯ ಒಂದು ಸ್ಕ್ರೀನ್‌ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಐನೆಕ್ಸ್‌ನ ೨ನೇ ಸ್ಕ್ರೀನ್‌ನಲ್ಲಿ ಕನ್ನಡದ ಸಿನಿಮಾಗಳು, ೩ನೇ ಸ್ಕ್ರೀನ್‌ನಲ್ಲಿ ಭಾರತೀಯ ಸಿನಿಮಾಗಳು, ೪ನೇ ಸ್ಕ್ರೀನ್‌ನಲ್ಲಿ ವಿಶ್ವ ಸಿನಿಮಾಗಳು ಪ್ರದರ್ಶನವಾಗುತ್ತಿವೆ. ಡಿಆರ್‌ಸಿಯಲ್ಲಿ ಕನ್ನಡದ ಇತ್ತೀಚಿನ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.

೩ನೇ ಸ್ಕ್ರೀನ್‌ನಲ್ಲಿ ಪ್ರದರ್ಶನ ಕಂಡ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಯಿತು.
೪ನೇ ಸ್ಕ್ರೀನ್‌ನಲ್ಲಿ ಪ್ರದರ್ಶನಗೊಂಡ ವಿಟ್ಟೂರೊ ಡೆ ಸಿಕಾ ನಿರ್ದೇಶನದ ಇಟಲಿ ಭಾಷೆಯ ‘ಬೈಸಿಕಲ್ ಥೀವ್ಸ್’(ಲಾಡ್ರಿ ಡಿ ಬೈಸಿಕಲ್ಲೆ) ಚಿತ್ರ ನೋಡುಗರ ಎದೆಯನ್ನು ಮೆತ್ತಗಾಗಿಸಿತು. ಇಟಲಿಯಲ್ಲಿ ಯುದ್ಧವಾದ ನಂತರದ ಜನಜೀವನದ ದುರಂತ ಬದುಕನ್ನು ಕಟ್ಟಿಕೊಡುವ ಈ ಚಿತ್ರ ಕಾಯಕ ಜೀವಿಯೊಬ್ಬನ ಬೈಸಿಕಲ್ ಕಳುವಾದ ಕಥೆ ಹೊಂದಿದೆ. ಆತನ ಮೂಲಕ ಸಾಮಾಜಿಕ, ಆರ್ಥಿಕ ಮುಗ್ಗಟ್ಟುಗಳ ದರ್ಶನವನ್ನು ಚಿತ್ರ ಮಾಡಿಸುತ್ತದೆ.

ನಾಳೆ ಪುನೀತ್ ಚಿತ್ರೋತ್ಸವ 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆಯ್ದ ಚಲನಚಿತ್ರಗಳನ್ನು ಒಂದು ದಿನ ಪ್ರದರ್ಶನ ಮಾಡುವ ಮೂಲಕ ಅವರಿಗೆ ಸಿನಿಮಾ ನಮನವನ್ನು ಅರ್ಪಿಸುವ ಕೆಲಸವನ್ನು ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಮಾಡುತ್ತಿದೆ.

ಶೇಷ್ಟ್ರ ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಗಳಿಸಿಕೊಂಡಿರುವ ‘ಬೆಟ್ಟದ ಹೂ’ ಚಿತ್ರದ ಮೂಲಕ ಉತ್ಸವ ಪ್ರಾರಂಭವಾಗಲಿದೆ. ಐನೆಕ್ಸ್‌ನಲ್ಲಿ ಬೆಟ್ಟದ ಹೂ, ರಾಜಕುಮಾರ, ರಣವಿಕ್ರಮ, ಯುವರತ್ನ ಪ್ರದರ್ಶನಗೊಂಡರೆ, ಡಿಆರ್‌ಸಿಯಲ್ಲಿ ಬೆಟ್ಟದ ಹೂವು, ಯುವರತ್ನ, ಪೃಥ್ವಿ, ಅಂಜನೀ ಪುತ್ರ ಪ್ರದರ್ಶನಗೊಳ್ಳಲಿವೆ.
ಅಶ್ವಿನಿ ಪುನೀತ್ ರಾಜಕುಮಾರ್ ಅವರು ಐನೆಕ್ಸ್‌ನಲ್ಲಿ ಬೆಳಿಗ್ಗೆ ೧೦ಕ್ಕೆ ಚಿತ್ರೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ. ಶಕ್ತಿಧಾಮದ ಮಕ್ಕಳ ಜತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

andolana

Recent Posts

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

8 seconds ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

31 mins ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

1 hour ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

3 hours ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

3 hours ago