ಚಿತ್ರ ಮಂಜರಿ

ಚಲನಚಿತ್ರೋತ್ಸವ: ಮೊದಲ ದಿನ ‘ಪ್ರತಿಕ್ರಿಯೆ’ ಉತ್ತಮ

ಮೈಸೂರು: ನಗರದ ಐನೆಕ್ಸ್ ಹಾಗೂ ಡಿಆರ್‌ಸಿ ಚಿತ್ರಮಂದಿರಗಳಲ್ಲಿ ಮಂಗಳವಾರದಿಂದ ಪ್ರಾರಂಭವಾದ ದಸರಾ ಚಲನಚಿತ್ರೋತ್ಸವಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಐನೆಕ್ಸ್‌ನ ೨, ೩ ಮತ್ತು ೪ನೇ ಸ್ಕ್ರೀನ್‌ನಲ್ಲಿ ಚಿತ್ರಗಳ ಪ್ರದರ್ಶನಗೊಂಡರೆ, ಡಿಆರ್‌ಸಿಯ ಒಂದು ಸ್ಕ್ರೀನ್‌ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಐನೆಕ್ಸ್‌ನ ೨ನೇ ಸ್ಕ್ರೀನ್‌ನಲ್ಲಿ ಕನ್ನಡದ ಸಿನಿಮಾಗಳು, ೩ನೇ ಸ್ಕ್ರೀನ್‌ನಲ್ಲಿ ಭಾರತೀಯ ಸಿನಿಮಾಗಳು, ೪ನೇ ಸ್ಕ್ರೀನ್‌ನಲ್ಲಿ ವಿಶ್ವ ಸಿನಿಮಾಗಳು ಪ್ರದರ್ಶನವಾಗುತ್ತಿವೆ. ಡಿಆರ್‌ಸಿಯಲ್ಲಿ ಕನ್ನಡದ ಇತ್ತೀಚಿನ ಸಿನಿಮಾಗಳನ್ನು ವೀಕ್ಷಣೆ ಮಾಡಬಹುದಾಗಿದೆ.

೩ನೇ ಸ್ಕ್ರೀನ್‌ನಲ್ಲಿ ಪ್ರದರ್ಶನ ಕಂಡ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಯಿತು.
೪ನೇ ಸ್ಕ್ರೀನ್‌ನಲ್ಲಿ ಪ್ರದರ್ಶನಗೊಂಡ ವಿಟ್ಟೂರೊ ಡೆ ಸಿಕಾ ನಿರ್ದೇಶನದ ಇಟಲಿ ಭಾಷೆಯ ‘ಬೈಸಿಕಲ್ ಥೀವ್ಸ್’(ಲಾಡ್ರಿ ಡಿ ಬೈಸಿಕಲ್ಲೆ) ಚಿತ್ರ ನೋಡುಗರ ಎದೆಯನ್ನು ಮೆತ್ತಗಾಗಿಸಿತು. ಇಟಲಿಯಲ್ಲಿ ಯುದ್ಧವಾದ ನಂತರದ ಜನಜೀವನದ ದುರಂತ ಬದುಕನ್ನು ಕಟ್ಟಿಕೊಡುವ ಈ ಚಿತ್ರ ಕಾಯಕ ಜೀವಿಯೊಬ್ಬನ ಬೈಸಿಕಲ್ ಕಳುವಾದ ಕಥೆ ಹೊಂದಿದೆ. ಆತನ ಮೂಲಕ ಸಾಮಾಜಿಕ, ಆರ್ಥಿಕ ಮುಗ್ಗಟ್ಟುಗಳ ದರ್ಶನವನ್ನು ಚಿತ್ರ ಮಾಡಿಸುತ್ತದೆ.

ನಾಳೆ ಪುನೀತ್ ಚಿತ್ರೋತ್ಸವ 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆಯ್ದ ಚಲನಚಿತ್ರಗಳನ್ನು ಒಂದು ದಿನ ಪ್ರದರ್ಶನ ಮಾಡುವ ಮೂಲಕ ಅವರಿಗೆ ಸಿನಿಮಾ ನಮನವನ್ನು ಅರ್ಪಿಸುವ ಕೆಲಸವನ್ನು ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಮಾಡುತ್ತಿದೆ.

ಶೇಷ್ಟ್ರ ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಗಳಿಸಿಕೊಂಡಿರುವ ‘ಬೆಟ್ಟದ ಹೂ’ ಚಿತ್ರದ ಮೂಲಕ ಉತ್ಸವ ಪ್ರಾರಂಭವಾಗಲಿದೆ. ಐನೆಕ್ಸ್‌ನಲ್ಲಿ ಬೆಟ್ಟದ ಹೂ, ರಾಜಕುಮಾರ, ರಣವಿಕ್ರಮ, ಯುವರತ್ನ ಪ್ರದರ್ಶನಗೊಂಡರೆ, ಡಿಆರ್‌ಸಿಯಲ್ಲಿ ಬೆಟ್ಟದ ಹೂವು, ಯುವರತ್ನ, ಪೃಥ್ವಿ, ಅಂಜನೀ ಪುತ್ರ ಪ್ರದರ್ಶನಗೊಳ್ಳಲಿವೆ.
ಅಶ್ವಿನಿ ಪುನೀತ್ ರಾಜಕುಮಾರ್ ಅವರು ಐನೆಕ್ಸ್‌ನಲ್ಲಿ ಬೆಳಿಗ್ಗೆ ೧೦ಕ್ಕೆ ಚಿತ್ರೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ. ಶಕ್ತಿಧಾಮದ ಮಕ್ಕಳ ಜತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

andolana

Recent Posts

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

2 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

2 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

2 hours ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

2 hours ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

5 hours ago