ಚಿತ್ರ ಮಂಜರಿ

ಫಿಲ್ಮ್‌ಫೇರ್ ಸೌತ್ ಪ್ರಶಸ್ತಿ: ಪವರ್ ಸ್ಟಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಸೈಮಾ ಅವಾರ್ಡ್ ಸೌತ್ ಸಮಾರಂಭದ ಬೆನ್ನಲ್ಲೇ ಫಿಲ್ಮ್‌ಫೇರ್ ಅವಾರ್ಡ್ ಸೌತ್ ಸಮಾರಂಭ ಕೂಡ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದೆ. 67ನೇ ಸಾಲಿನ ಫಿಲ್ಮ್​ಫೇರ್​ ಸಮಾರಂಭ ಬೆಂಗಳೂರಿನ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಭಾನುವಾರ (ಅಕ್ಟೋಬರ್ 9) ನಡೆದ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ, ತಮಿಳು, ತೆಲುಗು ಮತ್ತು ಮಲಾಯಳಂ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಕನ್ನಡದಲ್ಲಿ ನಟ ಧನಂಜಯ್, ನಟಿ ಯಜ್ಞಾ ಶೆಟ್ಟಿ, ತಮಿಳಿನಲ್ಲಿ ನಟ ಸೂರ್ಯ, ನಟಿ ಲಿಜೋಮೋಲ್ ಜೋಸ್ ಮತ್ತು ತೆಲುಗಿನಲ್ಲಿ ನಟ ಅಲ್ಲುಅರ್ಜುನ್ ಮತ್ತು ಸಾಯಿ ಪಲ್ಲವಿ ಹಾಗೂ ಮಲಯಾಳಂನಲ್ಲಿ ಬಿಜು ಮೆನನ್ ಮತ್ತು ನಟಿ ನಿಮಿಶಾ ಅವರಿಗೆ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿ ಗರಿ ಸಿಕ್ಕಿದೆ. ಇನ್ನು ಜೀವಮಾನ ಸಾಧನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಅವರಿಗೆ ನೀಡಲಾಗಿದೆ.

ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಧನಂಜಯ್ ಪಾಲಾಗಿದೆ. ಬಡವ ರಾಸ್ಕಲ್ ಸಿನಿಮಾದ ಉತ್ತಮ ಅಭಿನಯಕ್ಕೆ ಧನಂಜಯ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇನ್ನು ಅತ್ಯುತ್ತಮ ನಟಿ ಪ್ರಶಸ್ತಿ ಯಜ್ಞಾ ಶೆಟ್ಟಿ ಪಡೆದಿದ್ದಾರೆ. ಆಕ್ಟ್​ 1978 ಸಿನಿಮಾದ ಉತ್ತಮ ನಟನೆಗೆ ಈ ಪ್ರಶಸ್ತಿ ದೊರೆತಿದೆ. ಇನ್ನು ರಾಜ್​ ಬಿ. ಶೆಟ್ಟಿ ಅವರಿಗೆ ಗರುಡ ಗಮನ ವೃಷಭ ವಾಹನ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ನೀಡಲಾಗಿದೆ.

ಫಿಲ್ಮ್‌ಫೇರ್ ಪ್ರಶಸ್ತಿ ಪಡೆಯುವುದು ಅನೇಕ ನಟ-ನಟಿಯರ ಕನಸು. ಅದರಲ್ಲೂ ಬೆಂಗಳೂರಿನಲ್ಲೇ ಫಿಲ್ಮ್‌ಫೇರ್ ಸಮಾರಂಭ ನಡೆಯುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಪ್ರತಿವರ್ಷ ಅವಾರ್ಡ್ ಸಾಮಾರಂಭಗಳಿಗೆ ಬೇರೆ ರಾಜ್ಯಗಳಿಗೆ ಹೋಗಬೇಕಿತ್ತು. ಆದರೆ ಈ ವರ್ಷ ಸೈಮಾ ಮತ್ತು ಫಿಲ್ಮ್‌ಫೇರ್ ಅವಾರ್ಡ್ ಸಮಾರಂಭ ಬೆಂಗಳೂರಿನಲ್ಲೇ ನಡೆದಿದ್ದು ವಿಶೇಷ.

ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡಿಗರ ಪಟ್ಟಿ:

ಅತ್ಯುತ್ತಮ ನಟ: ಧನಂಜಯ್​ (ಬಡವ ರಾಸ್ಕಲ್​)

ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್​ 1978)

ಅತ್ಯುತ್ತಮ ಸಿನಿಮಾ: ಆಕ್ಟ್​ 1978 (ನಿರ್ದೇಶನ ಮಂಸೋರೆ)

ಅತ್ಯುತ್ತಮ ನಿರ್ದೇಶಕ: ರಾಜ್​ ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಅತ್ಯುತ್ತಮ ಪೋಷಕ ನಟ: ಬಿ. ಸುರೇಶ (ಆಕ್ಟ್​ 1978)

ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್​ ಪ್ರಪಂಚ)

ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್​ (ಬಡವ ರಾಸ್ಕಲ್​)

ಅತ್ಯುತ್ತಮ ಸಾಹಿತ್ಯ: ಜಯಂತ ಕಾಯ್ಕಿಣಿ (ಆಕ್ಟ್​ 1978)

ಅತ್ಯುತ್ತಮ ಗಾಯಕ: ರಘು ದೀಕ್ಷಿತ್​ (ನಿನ್ನ ಸನಿಹಕೆ)

ಅತ್ಯುತ್ತಮ ಗಾಯಕಿ: ಅನುರಾಧಾ ಭಟ್​ (ಬಿಚ್ಚುಗತ್ತಿ)

ಅತ್ಯುತ್ತಮ ಛಾಯಾಗ್ರಾಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್​)

ಅತ್ಯುತ್ತಮ ನೃತ್ಯ ನಿರ್ದೇಶಕ: ಜಾನಿ ಮಾಸ್ಟರ್​ (ಫೀಲ್​ ದ ಪವರ್​- ಯುವರತ್ನ)

ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್​ ರಾಜ್​ಕುಮಾರ್​

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್​, ಅಮೃತಾ ಅಯ್ಯಂಗಾರ್​

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್​ ಕೃಷ್ಣ (ಲವ್​ ಮಾಕ್ಟೇಲ್​)

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

7 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

7 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

7 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

8 hours ago