ಚಿತ್ರ ಮಂಜರಿ

ಫಿಲ್ಮ್‌ಫೇರ್ ಸೌತ್ ಪ್ರಶಸ್ತಿ: ಪವರ್ ಸ್ಟಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಸೈಮಾ ಅವಾರ್ಡ್ ಸೌತ್ ಸಮಾರಂಭದ ಬೆನ್ನಲ್ಲೇ ಫಿಲ್ಮ್‌ಫೇರ್ ಅವಾರ್ಡ್ ಸೌತ್ ಸಮಾರಂಭ ಕೂಡ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದೆ. 67ನೇ ಸಾಲಿನ ಫಿಲ್ಮ್​ಫೇರ್​ ಸಮಾರಂಭ ಬೆಂಗಳೂರಿನ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಭಾನುವಾರ (ಅಕ್ಟೋಬರ್ 9) ನಡೆದ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ, ತಮಿಳು, ತೆಲುಗು ಮತ್ತು ಮಲಾಯಳಂ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಕನ್ನಡದಲ್ಲಿ ನಟ ಧನಂಜಯ್, ನಟಿ ಯಜ್ಞಾ ಶೆಟ್ಟಿ, ತಮಿಳಿನಲ್ಲಿ ನಟ ಸೂರ್ಯ, ನಟಿ ಲಿಜೋಮೋಲ್ ಜೋಸ್ ಮತ್ತು ತೆಲುಗಿನಲ್ಲಿ ನಟ ಅಲ್ಲುಅರ್ಜುನ್ ಮತ್ತು ಸಾಯಿ ಪಲ್ಲವಿ ಹಾಗೂ ಮಲಯಾಳಂನಲ್ಲಿ ಬಿಜು ಮೆನನ್ ಮತ್ತು ನಟಿ ನಿಮಿಶಾ ಅವರಿಗೆ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿ ಗರಿ ಸಿಕ್ಕಿದೆ. ಇನ್ನು ಜೀವಮಾನ ಸಾಧನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಅವರಿಗೆ ನೀಡಲಾಗಿದೆ.

ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಧನಂಜಯ್ ಪಾಲಾಗಿದೆ. ಬಡವ ರಾಸ್ಕಲ್ ಸಿನಿಮಾದ ಉತ್ತಮ ಅಭಿನಯಕ್ಕೆ ಧನಂಜಯ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇನ್ನು ಅತ್ಯುತ್ತಮ ನಟಿ ಪ್ರಶಸ್ತಿ ಯಜ್ಞಾ ಶೆಟ್ಟಿ ಪಡೆದಿದ್ದಾರೆ. ಆಕ್ಟ್​ 1978 ಸಿನಿಮಾದ ಉತ್ತಮ ನಟನೆಗೆ ಈ ಪ್ರಶಸ್ತಿ ದೊರೆತಿದೆ. ಇನ್ನು ರಾಜ್​ ಬಿ. ಶೆಟ್ಟಿ ಅವರಿಗೆ ಗರುಡ ಗಮನ ವೃಷಭ ವಾಹನ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ನೀಡಲಾಗಿದೆ.

ಫಿಲ್ಮ್‌ಫೇರ್ ಪ್ರಶಸ್ತಿ ಪಡೆಯುವುದು ಅನೇಕ ನಟ-ನಟಿಯರ ಕನಸು. ಅದರಲ್ಲೂ ಬೆಂಗಳೂರಿನಲ್ಲೇ ಫಿಲ್ಮ್‌ಫೇರ್ ಸಮಾರಂಭ ನಡೆಯುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಪ್ರತಿವರ್ಷ ಅವಾರ್ಡ್ ಸಾಮಾರಂಭಗಳಿಗೆ ಬೇರೆ ರಾಜ್ಯಗಳಿಗೆ ಹೋಗಬೇಕಿತ್ತು. ಆದರೆ ಈ ವರ್ಷ ಸೈಮಾ ಮತ್ತು ಫಿಲ್ಮ್‌ಫೇರ್ ಅವಾರ್ಡ್ ಸಮಾರಂಭ ಬೆಂಗಳೂರಿನಲ್ಲೇ ನಡೆದಿದ್ದು ವಿಶೇಷ.

ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡಿಗರ ಪಟ್ಟಿ:

ಅತ್ಯುತ್ತಮ ನಟ: ಧನಂಜಯ್​ (ಬಡವ ರಾಸ್ಕಲ್​)

ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್​ 1978)

ಅತ್ಯುತ್ತಮ ಸಿನಿಮಾ: ಆಕ್ಟ್​ 1978 (ನಿರ್ದೇಶನ ಮಂಸೋರೆ)

ಅತ್ಯುತ್ತಮ ನಿರ್ದೇಶಕ: ರಾಜ್​ ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಅತ್ಯುತ್ತಮ ಪೋಷಕ ನಟ: ಬಿ. ಸುರೇಶ (ಆಕ್ಟ್​ 1978)

ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್​ ಪ್ರಪಂಚ)

ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್​ (ಬಡವ ರಾಸ್ಕಲ್​)

ಅತ್ಯುತ್ತಮ ಸಾಹಿತ್ಯ: ಜಯಂತ ಕಾಯ್ಕಿಣಿ (ಆಕ್ಟ್​ 1978)

ಅತ್ಯುತ್ತಮ ಗಾಯಕ: ರಘು ದೀಕ್ಷಿತ್​ (ನಿನ್ನ ಸನಿಹಕೆ)

ಅತ್ಯುತ್ತಮ ಗಾಯಕಿ: ಅನುರಾಧಾ ಭಟ್​ (ಬಿಚ್ಚುಗತ್ತಿ)

ಅತ್ಯುತ್ತಮ ಛಾಯಾಗ್ರಾಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್​)

ಅತ್ಯುತ್ತಮ ನೃತ್ಯ ನಿರ್ದೇಶಕ: ಜಾನಿ ಮಾಸ್ಟರ್​ (ಫೀಲ್​ ದ ಪವರ್​- ಯುವರತ್ನ)

ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್​ ರಾಜ್​ಕುಮಾರ್​

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್​, ಅಮೃತಾ ಅಯ್ಯಂಗಾರ್​

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್​ ಕೃಷ್ಣ (ಲವ್​ ಮಾಕ್ಟೇಲ್​)

andolana

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

4 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

5 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago