ಬೆಂಗಳೂರು: ಸೈಮಾ ಅವಾರ್ಡ್ ಸೌತ್ ಸಮಾರಂಭದ ಬೆನ್ನಲ್ಲೇ ಫಿಲ್ಮ್ಫೇರ್ ಅವಾರ್ಡ್ ಸೌತ್ ಸಮಾರಂಭ ಕೂಡ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದೆ. 67ನೇ ಸಾಲಿನ ಫಿಲ್ಮ್ಫೇರ್ ಸಮಾರಂಭ ಬೆಂಗಳೂರಿನ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಭಾನುವಾರ (ಅಕ್ಟೋಬರ್ 9) ನಡೆದ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ, ತಮಿಳು, ತೆಲುಗು ಮತ್ತು ಮಲಾಯಳಂ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಕನ್ನಡದಲ್ಲಿ ನಟ ಧನಂಜಯ್, ನಟಿ ಯಜ್ಞಾ ಶೆಟ್ಟಿ, ತಮಿಳಿನಲ್ಲಿ ನಟ ಸೂರ್ಯ, ನಟಿ ಲಿಜೋಮೋಲ್ ಜೋಸ್ ಮತ್ತು ತೆಲುಗಿನಲ್ಲಿ ನಟ ಅಲ್ಲುಅರ್ಜುನ್ ಮತ್ತು ಸಾಯಿ ಪಲ್ಲವಿ ಹಾಗೂ ಮಲಯಾಳಂನಲ್ಲಿ ಬಿಜು ಮೆನನ್ ಮತ್ತು ನಟಿ ನಿಮಿಶಾ ಅವರಿಗೆ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿ ಗರಿ ಸಿಕ್ಕಿದೆ. ಇನ್ನು ಜೀವಮಾನ ಸಾಧನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಅವರಿಗೆ ನೀಡಲಾಗಿದೆ.
ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಧನಂಜಯ್ ಪಾಲಾಗಿದೆ. ಬಡವ ರಾಸ್ಕಲ್ ಸಿನಿಮಾದ ಉತ್ತಮ ಅಭಿನಯಕ್ಕೆ ಧನಂಜಯ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇನ್ನು ಅತ್ಯುತ್ತಮ ನಟಿ ಪ್ರಶಸ್ತಿ ಯಜ್ಞಾ ಶೆಟ್ಟಿ ಪಡೆದಿದ್ದಾರೆ. ಆಕ್ಟ್ 1978 ಸಿನಿಮಾದ ಉತ್ತಮ ನಟನೆಗೆ ಈ ಪ್ರಶಸ್ತಿ ದೊರೆತಿದೆ. ಇನ್ನು ರಾಜ್ ಬಿ. ಶೆಟ್ಟಿ ಅವರಿಗೆ ಗರುಡ ಗಮನ ವೃಷಭ ವಾಹನ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ನೀಡಲಾಗಿದೆ.
ಫಿಲ್ಮ್ಫೇರ್ ಪ್ರಶಸ್ತಿ ಪಡೆಯುವುದು ಅನೇಕ ನಟ-ನಟಿಯರ ಕನಸು. ಅದರಲ್ಲೂ ಬೆಂಗಳೂರಿನಲ್ಲೇ ಫಿಲ್ಮ್ಫೇರ್ ಸಮಾರಂಭ ನಡೆಯುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ. ಪ್ರತಿವರ್ಷ ಅವಾರ್ಡ್ ಸಾಮಾರಂಭಗಳಿಗೆ ಬೇರೆ ರಾಜ್ಯಗಳಿಗೆ ಹೋಗಬೇಕಿತ್ತು. ಆದರೆ ಈ ವರ್ಷ ಸೈಮಾ ಮತ್ತು ಫಿಲ್ಮ್ಫೇರ್ ಅವಾರ್ಡ್ ಸಮಾರಂಭ ಬೆಂಗಳೂರಿನಲ್ಲೇ ನಡೆದಿದ್ದು ವಿಶೇಷ.
ಫಿಲ್ಮ್ಫೇರ್ ಪ್ರಶಸ್ತಿ ಪಡೆದ ಕನ್ನಡಿಗರ ಪಟ್ಟಿ:
ಅತ್ಯುತ್ತಮ ನಟ: ಧನಂಜಯ್ (ಬಡವ ರಾಸ್ಕಲ್)
ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್ 1978)
ಅತ್ಯುತ್ತಮ ಸಿನಿಮಾ: ಆಕ್ಟ್ 1978 (ನಿರ್ದೇಶನ ಮಂಸೋರೆ)
ಅತ್ಯುತ್ತಮ ನಿರ್ದೇಶಕ: ರಾಜ್ ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)
ಅತ್ಯುತ್ತಮ ಪೋಷಕ ನಟ: ಬಿ. ಸುರೇಶ (ಆಕ್ಟ್ 1978)
ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್ ಪ್ರಪಂಚ)
ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್ (ಬಡವ ರಾಸ್ಕಲ್)
ಅತ್ಯುತ್ತಮ ಸಾಹಿತ್ಯ: ಜಯಂತ ಕಾಯ್ಕಿಣಿ (ಆಕ್ಟ್ 1978)
ಅತ್ಯುತ್ತಮ ಗಾಯಕ: ರಘು ದೀಕ್ಷಿತ್ (ನಿನ್ನ ಸನಿಹಕೆ)
ಅತ್ಯುತ್ತಮ ಗಾಯಕಿ: ಅನುರಾಧಾ ಭಟ್ (ಬಿಚ್ಚುಗತ್ತಿ)
ಅತ್ಯುತ್ತಮ ಛಾಯಾಗ್ರಾಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್)
ಅತ್ಯುತ್ತಮ ನೃತ್ಯ ನಿರ್ದೇಶಕ: ಜಾನಿ ಮಾಸ್ಟರ್ (ಫೀಲ್ ದ ಪವರ್- ಯುವರತ್ನ)
ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್ ರಾಜ್ಕುಮಾರ್
ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್
ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್)
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…