ಪಂಜಾಬಿ ಗಾಯಕ ಮತ್ತು ನಟ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ವ್ಯಾಂಕೋವರ್ನ ವೈಟ್ ರಾಕ್ನಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮೂಲತಃ ಮೊಹಾಲಿಯವರಾದ ಗಾಯಕ ಗಿಪ್ಪಿ ಗ್ರೆವಾಲ್ಗೆ ಈ ಹಿಂದೆ ಗ್ಯಾಂಗ್ಸ್ಟರ್ಗಳಿಂದ ಬೆದರಿಕೆಗಳು ಬಂದಿದ್ದವು, ನಂತರ ಅವರಿಗೆ ಭದ್ರತೆಯನ್ನು ಒದಗಿಸಲಾಯಿತು. ಪ್ರಸ್ತುತ ಅವರು ಕೆನಡಾದಲ್ಲಿ ನೆಲೆಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ, ಸಲ್ಮಾನ್ ಖಾನ್ ಗೆ ನೀನು ತುಂಬಾ ಆತ್ಮೀಯ. ನಿನ್ನನ್ನು ಈಗಲೇ ಕಾಪಾಡು ಎಂದು ನಿನ್ನ ಅಣ್ಣನಿಗೆ ಹೇಳು. ನಮ್ಮಿಂದ ನಿನ್ನನ್ನು ಯಾರೂ ರಕ್ಷಿಸುತ್ತಾರೆ. ಈಗ ನಾವು ನೀಡಿರುವ ಸಂದೇಶ ಸಲ್ಮಾನ್ ಖಾನ್ಗಾಗಿ. ನಿನ್ನನ್ನು ನಮ್ಮಿಂದ ದಾವೂದ್ ಇಬ್ರಾಹಿಂ ರಕ್ಷಿಸುತ್ತಾನೆ ಎಂದುಕೊಂಡು ಸುಖವಾಗಿ ಕಾಲ ಕಳೆಯಬೇಡ ಎಂದು ಬಾಲಿವುಡ್ ಭಾಯ್ಜಾನ್ ವಿರುದ್ಧ ಪೋಸ್ಟ್ ಮಾಡಿದ್ದಾರೆ.
ಗಿಪ್ಪಿ ಅವರ ಕಾಮಿಡಿ ಚಿತ್ರ ‘ಮೌಜಾ ಹಿ ಮೌಜಾ’ ಟ್ರೇಲರ್ ಲಾಂಚ್ ಆಗಿತ್ತು. ಈ ಈವಂಟ್ನಲ್ಲಿ ಸಲ್ಮಾನ್ ಖಾನ್ ಕೂಡ ಭಾಗವಹಿಸಿದ್ದರು. ಗಿಪ್ಪಿ ಗ್ರೆವಾಲ್ ಅವರ ‘ಮೌಜಾ ಹಿ ಮೌಜಾ’ ಚಿತ್ರದ ಟ್ರೈಲರ್ ಅನ್ನು ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವ ಮೂಲಕ ತಂಡಕ್ಕೆ ತಮ್ಮ ಶುಭ ಕೋರಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…