ಚಿತ್ರ ಮಂಜರಿ

ಗಿಪ್ಪಿ ಮನೆ ಮೇಲೆ ಗುಂಡಿನ ದಾಳಿ: ಸಲ್ಲುಗೂ ಎಚ್ಚರಿಕೆ ಕೊಟ್ರಾ ಲಾರೆನ್ಸ್‌ ಬಿಷ್ಣೋಯ್‌

ಪಂಜಾಬಿ ಗಾಯಕ ಮತ್ತು ನಟ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ವ್ಯಾಂಕೋವರ್‌ನ ವೈಟ್ ರಾಕ್‌ನಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್‌ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಮೂಲತಃ ಮೊಹಾಲಿಯವರಾದ ಗಾಯಕ ಗಿಪ್ಪಿ ಗ್ರೆವಾಲ್‌ಗೆ ಈ ಹಿಂದೆ ಗ್ಯಾಂಗ್‌ಸ್ಟರ್‌ಗಳಿಂದ ಬೆದರಿಕೆಗಳು ಬಂದಿದ್ದವು, ನಂತರ ಅವರಿಗೆ ಭದ್ರತೆಯನ್ನು ಒದಗಿಸಲಾಯಿತು. ಪ್ರಸ್ತುತ ಅವರು ಕೆನಡಾದಲ್ಲಿ ನೆಲೆಸಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಸಲ್ಮಾನ್ ಖಾನ್ ಗೆ ನೀನು ತುಂಬಾ ಆತ್ಮೀಯ. ನಿನ್ನನ್ನು ಈಗಲೇ ಕಾಪಾಡು ಎಂದು ನಿನ್ನ ಅಣ್ಣನಿಗೆ ಹೇಳು. ನಮ್ಮಿಂದ ನಿನ್ನನ್ನು ಯಾರೂ ರಕ್ಷಿಸುತ್ತಾರೆ. ಈಗ ನಾವು ನೀಡಿರುವ ಸಂದೇಶ ಸಲ್ಮಾನ್ ಖಾನ್‌ಗಾಗಿ. ನಿನ್ನನ್ನು ನಮ್ಮಿಂದ ದಾವೂದ್ ಇಬ್ರಾಹಿಂ ರಕ್ಷಿಸುತ್ತಾನೆ ಎಂದುಕೊಂಡು ಸುಖವಾಗಿ ಕಾಲ ಕಳೆಯಬೇಡ ಎಂದು ಬಾಲಿವುಡ್‌ ಭಾಯ್‌ಜಾನ್‌ ವಿರುದ್ಧ ಪೋಸ್ಟ್‌ ಮಾಡಿದ್ದಾರೆ.

ಗಿಪ್ಪಿ ಅವರ ಕಾಮಿಡಿ ಚಿತ್ರ ‘ಮೌಜಾ ಹಿ ಮೌಜಾ’ ಟ್ರೇಲರ್ ಲಾಂಚ್ ಆಗಿತ್ತು. ಈ ಈವಂಟ್‌ನಲ್ಲಿ ಸಲ್ಮಾನ್ ಖಾನ್ ಕೂಡ ಭಾಗವಹಿಸಿದ್ದರು. ಗಿಪ್ಪಿ ಗ್ರೆವಾಲ್ ಅವರ ‘ಮೌಜಾ ಹಿ ಮೌಜಾ’ ಚಿತ್ರದ ಟ್ರೈಲರ್ ಅನ್ನು ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ತಂಡಕ್ಕೆ ತಮ್ಮ ಶುಭ ಕೋರಿದ್ದಾರೆ.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

6 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

7 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

9 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

12 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago