ಚಿತ್ರ ಮಂಜರಿ

ಮೊದಲ ಲುಕ್ ನಲ್ಲಿಯೇ ಅಸ್ಪಷ್ಟವಾಗಿ ಕಾಣಿಸಿಕೊಂಡ ಅಜಿತ್ ಕುಮಾರ್ 61ನೇ ಸಿನಿಮಾ!

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರ 61ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಯಾವ ಟೈಟಲ್ ಫೈನಲ್ ಆಗಲಿದೆ ಎಂಬ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇತ್ತು. ಕೊನೆಗೂ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಚಿತ್ರಕ್ಕೆ ‘ತುನಿವು’ (Thunivu)ಎಂದು ಟೈಟಲ್ ಇಡಲಾಗಿದೆ. ಇದಕ್ಕೆ ಧೈರ್ಯ ಎಂಬರ್ಥ ಇದೆ. ಈ ಸಿನಿಮಾದ ಫಸ್ಟ್ ಪೋಸ್ಟರ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಸಖತ್ ಮಾಸ್ ಆಗಿ ಮೂಡಿ ಬರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಅಜಿತ್ ಅವರು ಕುರ್ಚಿ ಮೇಲೆ ಕುಳಿತಿದ್ದಾರೆ. ಕೈಯಲ್ಲಿ ಅವರು ಗನ್ ಹಿಡಿದ್ದಾರೆ. ಫಸ್ಟ್ ಪೋಸ್ಟರ್ ಅಸ್ಪಷ್ಟವಾಗಿದೆ. ಒಟ್ಟಿನಲ್ಲಿ ಅಜಿತ್ ಅವರ ಲುಕ್ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಂತೂ ನಿಜ. ಈ ಚಿತ್ರಕ್ಕೆ ಮಲಯಾಳಂನ ಮಂಜು ವಾರಿಯರ್ ನಾಯಕಿ. ಅವರ ಪೋಸ್ಟರ್ ರಿಲೀಸ್ ಆಗಲಿ ಎಂದು ಮಂಜು ಫ್ಯಾನ್ಸ್ ಕಾಯುತ್ತಿದ್ದಾರೆ.

ಅಜಿತ್ ಅವರು ಈ ಮೊದಲು ‘ವಿವೇಗಮ್’, ‘ವೀರಮ್’ ಹಾಗೂ ‘ವಲಿಮೈ’ ಚಿತ್ರಗಳಲ್ಲಿ ನಟಿಸಿದ್ದರು. ಈ ಸಿನಿಮಾದ ಟೈಟಲ್ ರೀತಿಯಲ್ಲೇ ‘ತುನಿವು’ ಕೂಡ ಇದೆ. ಈ ಚಿತ್ರದಲ್ಲಿ ಅಜಿತ್ ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಗನ್ ಹಿಡಿದುಕೊಂಡಿರುವುದರಿಂದ ಅಜಿತ್ ಗ್ಯಾಂಗ್​ಸ್ಟರ್ ಪಾತ್ರ ಮಾಡುತ್ತಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ.

ಈ ಚಿತ್ರಕ್ಕೆ ಎಚ್​. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಜಿತ್ ಹಾಗೂ ವಿನೋದ್ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾ ಇದಾಗಿದೆ. ಈ ಮೊದಲು ‘ವಲಿಮೈ’ ಹಾಗೂ ‘ನೆರ್ಕೊಂಡ ಪಾರವೈ’ ಸಿನಿಮಾಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಮೂರನೇ ಸಿನಿಮಾಗಾಗಿ ಒಂದಾಗುತ್ತಿರುವುದರಿಂದ ಸಹಜವಾಗಿಯೇ ಕುತೂಹಲ ದ್ವಿಗುಣಗೊಂಡಿದೆ.

ಅಜಿತ್ ಅವರು ವಿಘ್ನೇಶ್​ ಶಿವನ್ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ವಿಚಾರವೂ ಸದ್ಯದ ಮಟ್ಟಿಗೆ ಗುಟ್ಟಾಗಿಯೇ ಇದೆ. ವಿಘ್ನೇಶ್​ ಶಿವನ್ ಅವರು ಇತ್ತೀಚೆಗೆ ನಟಿ ನಯನತಾರಾ ಜತೆ ಮದುವೆ ಆದರು. ಆ ಬಳಿಕ ಇಬ್ಬರೂ ವಿದೇಶ ಸುತ್ತಿ ಬಂದಿದ್ದಾರೆ. ಈಗ ವಿಘ್ನೇಶ್​ ಶಿವನ್ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago