ಚಿತ್ರ ಮಂಜರಿ

ನಿವೇಶನ ನೀಡುವುದಾಗಿ ನಂಬಿಸಿ ವಂಚನೆ: ದೂರು ನೀಡಿದ ಮಾಸ್ಟರ್ ಆನಂದ್!

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, ಮುಂಗಡ ಹಣವನ್ನೂ ವಾಪಸ್ ಕೊಡದೇ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

2020ರ ಸೆಪ್ಟಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ ಎನ್ನಲಾಗಿದೆ. ಇದೀಗ ವಂಚನೆ ಮಾಡಿದೆ ಎನ್ನಲಾಗಿರುವ ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

ಚಿತ್ರೀಕರಣಕ್ಕೆ ಎಂದು ತೆರಳಿದ್ದ ವೇಳೆ, ಮಾಸ್ಟರ್ ಆನಂದ್ ಕೆಲ ನಿವೇಶನಗಳನ್ನು ವೀಕ್ಷಿಸಿದ್ದರು. ಈ ಸಂದರ್ಭ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ನಿವೇಶನ ಒಂದನ್ನು ಆನಂದ್ ನೋಡಿದ್ದರು. ಈ ಸಂದರ್ಭ ಖಾಸಗಿ ಕಂಪನಿಯವರು, ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದು ಆ ಬಳಿಕ ರಾಮಸಂದ್ರದ 2000 ಸಾವಿರ ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿದ್ದು ಹಂತ ಹಂತವಾಗಿ ಮಾಸ್ಟರ್ ಆನಂದ್, 18.5 ಲಕ್ಷ ರೂ. ಮುಂಗಡ ಹಣವನ್ನು ಕಂಪನಿಗೆ ನೀಡಿದ್ದರು ಎನ್ನಲಾಗಿದೆ.

ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಈ ಕಂಪನಿ ಖರೀದಿ ಖರಾರು ಪತ್ರ ಕೂಡ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಈ ನಡುವೆ ನಿವೇಶನವನ್ನ ಬೇರೆಯವರಿಗೆ ಕಂಪನಿ ಮಾರಾಟ ಮಾಡಿದೆ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ವಾಪಸ್ ಮಾಡಲಿಲ್ಲ ಎನ್ನಲಾಗಿದೆ.

ಹೀಗಾಗಿ, ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ ಕಾಯ್ದೆ 2019ರ (ಬಿಯುಡಿಎಸ್ ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) ಅಡಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.

andolanait

Recent Posts

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ತಪಾಸಣೆ: ಕೈದಿಗಳ ಬಳಿ ಮಾರಕಾಸ್ತ್ರಗಳು ಪತ್ತೆ

ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…

18 mins ago

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…

49 mins ago

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…

1 hour ago

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…

1 hour ago

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

2 hours ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

2 hours ago