ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, ಮುಂಗಡ ಹಣವನ್ನೂ ವಾಪಸ್ ಕೊಡದೇ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.
2020ರ ಸೆಪ್ಟಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ ಎನ್ನಲಾಗಿದೆ. ಇದೀಗ ವಂಚನೆ ಮಾಡಿದೆ ಎನ್ನಲಾಗಿರುವ ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.
ಚಿತ್ರೀಕರಣಕ್ಕೆ ಎಂದು ತೆರಳಿದ್ದ ವೇಳೆ, ಮಾಸ್ಟರ್ ಆನಂದ್ ಕೆಲ ನಿವೇಶನಗಳನ್ನು ವೀಕ್ಷಿಸಿದ್ದರು. ಈ ಸಂದರ್ಭ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ನಿವೇಶನ ಒಂದನ್ನು ಆನಂದ್ ನೋಡಿದ್ದರು. ಈ ಸಂದರ್ಭ ಖಾಸಗಿ ಕಂಪನಿಯವರು, ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದು ಆ ಬಳಿಕ ರಾಮಸಂದ್ರದ 2000 ಸಾವಿರ ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿದ್ದು ಹಂತ ಹಂತವಾಗಿ ಮಾಸ್ಟರ್ ಆನಂದ್, 18.5 ಲಕ್ಷ ರೂ. ಮುಂಗಡ ಹಣವನ್ನು ಕಂಪನಿಗೆ ನೀಡಿದ್ದರು ಎನ್ನಲಾಗಿದೆ.
ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಈ ಕಂಪನಿ ಖರೀದಿ ಖರಾರು ಪತ್ರ ಕೂಡ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಈ ನಡುವೆ ನಿವೇಶನವನ್ನ ಬೇರೆಯವರಿಗೆ ಕಂಪನಿ ಮಾರಾಟ ಮಾಡಿದೆ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ವಾಪಸ್ ಮಾಡಲಿಲ್ಲ ಎನ್ನಲಾಗಿದೆ.
ಹೀಗಾಗಿ, ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ ಕಾಯ್ದೆ 2019ರ (ಬಿಯುಡಿಎಸ್ ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) ಅಡಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…