ಚಿತ್ರ ಮಂಜರಿ

ನಿವೇಶನ ನೀಡುವುದಾಗಿ ನಂಬಿಸಿ ವಂಚನೆ: ದೂರು ನೀಡಿದ ಮಾಸ್ಟರ್ ಆನಂದ್!

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, ಮುಂಗಡ ಹಣವನ್ನೂ ವಾಪಸ್ ಕೊಡದೇ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

2020ರ ಸೆಪ್ಟಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ ಎನ್ನಲಾಗಿದೆ. ಇದೀಗ ವಂಚನೆ ಮಾಡಿದೆ ಎನ್ನಲಾಗಿರುವ ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

ಚಿತ್ರೀಕರಣಕ್ಕೆ ಎಂದು ತೆರಳಿದ್ದ ವೇಳೆ, ಮಾಸ್ಟರ್ ಆನಂದ್ ಕೆಲ ನಿವೇಶನಗಳನ್ನು ವೀಕ್ಷಿಸಿದ್ದರು. ಈ ಸಂದರ್ಭ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ನಿವೇಶನ ಒಂದನ್ನು ಆನಂದ್ ನೋಡಿದ್ದರು. ಈ ಸಂದರ್ಭ ಖಾಸಗಿ ಕಂಪನಿಯವರು, ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದು ಆ ಬಳಿಕ ರಾಮಸಂದ್ರದ 2000 ಸಾವಿರ ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿದ್ದು ಹಂತ ಹಂತವಾಗಿ ಮಾಸ್ಟರ್ ಆನಂದ್, 18.5 ಲಕ್ಷ ರೂ. ಮುಂಗಡ ಹಣವನ್ನು ಕಂಪನಿಗೆ ನೀಡಿದ್ದರು ಎನ್ನಲಾಗಿದೆ.

ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಈ ಕಂಪನಿ ಖರೀದಿ ಖರಾರು ಪತ್ರ ಕೂಡ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಈ ನಡುವೆ ನಿವೇಶನವನ್ನ ಬೇರೆಯವರಿಗೆ ಕಂಪನಿ ಮಾರಾಟ ಮಾಡಿದೆ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ವಾಪಸ್ ಮಾಡಲಿಲ್ಲ ಎನ್ನಲಾಗಿದೆ.

ಹೀಗಾಗಿ, ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ ಕಾಯ್ದೆ 2019ರ (ಬಿಯುಡಿಎಸ್ ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) ಅಡಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

2 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

2 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

3 hours ago