ಚಿತ್ರ ಮಂಜರಿ

ನಿವೇಶನ ನೀಡುವುದಾಗಿ ನಂಬಿಸಿ ವಂಚನೆ: ದೂರು ನೀಡಿದ ಮಾಸ್ಟರ್ ಆನಂದ್!

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, ಮುಂಗಡ ಹಣವನ್ನೂ ವಾಪಸ್ ಕೊಡದೇ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

2020ರ ಸೆಪ್ಟಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಈ ವಂಚನೆ ನಡೆದಿದೆ ಎನ್ನಲಾಗಿದೆ. ಇದೀಗ ವಂಚನೆ ಮಾಡಿದೆ ಎನ್ನಲಾಗಿರುವ ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

ಚಿತ್ರೀಕರಣಕ್ಕೆ ಎಂದು ತೆರಳಿದ್ದ ವೇಳೆ, ಮಾಸ್ಟರ್ ಆನಂದ್ ಕೆಲ ನಿವೇಶನಗಳನ್ನು ವೀಕ್ಷಿಸಿದ್ದರು. ಈ ಸಂದರ್ಭ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ನಿವೇಶನ ಒಂದನ್ನು ಆನಂದ್ ನೋಡಿದ್ದರು. ಈ ಸಂದರ್ಭ ಖಾಸಗಿ ಕಂಪನಿಯವರು, ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದು ಆ ಬಳಿಕ ರಾಮಸಂದ್ರದ 2000 ಸಾವಿರ ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿದ್ದು ಹಂತ ಹಂತವಾಗಿ ಮಾಸ್ಟರ್ ಆನಂದ್, 18.5 ಲಕ್ಷ ರೂ. ಮುಂಗಡ ಹಣವನ್ನು ಕಂಪನಿಗೆ ನೀಡಿದ್ದರು ಎನ್ನಲಾಗಿದೆ.

ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಈ ಕಂಪನಿ ಖರೀದಿ ಖರಾರು ಪತ್ರ ಕೂಡ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಈ ನಡುವೆ ನಿವೇಶನವನ್ನ ಬೇರೆಯವರಿಗೆ ಕಂಪನಿ ಮಾರಾಟ ಮಾಡಿದೆ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ವಾಪಸ್ ಮಾಡಲಿಲ್ಲ ಎನ್ನಲಾಗಿದೆ.

ಹೀಗಾಗಿ, ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ ಕಾಯ್ದೆ 2019ರ (ಬಿಯುಡಿಎಸ್ ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) ಅಡಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

4 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago