ಚಿತ್ರ ಮಂಜರಿ

ವಂಶಿಕಾ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ.

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಶಾ ನರಸಪ್ಪಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ನಂತರ 39ನೇ ಎಸಿಎಮ್ಎಮ್ ಕೋರ್ಟ್ ಮುಂದೆ ನಿಶಾಳನ್ನು ಹಾಜರುಪಡಿಸಿದ್ದರು.

ಯಶಸ್ವಿನಿ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.

ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು. ಇದುವರೆಗೂ 17 ಜನರಿಗೆ ನಿಶಾ ವಂಚಿಸಿದ್ದಾಳೆ ಎಂದು  ಮೂಲಗಳು ತಿಳಿಸಿವೆ.
andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

35 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

41 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago