ಚಿತ್ರ ಮಂಜರಿ

ಇಂದಿನಿಂದ 3 ದಿನಗಳ ಕಾಲ “ಗಂಧದಗುಡಿ” ಸಿನಿಮಾ ಟಿಕೆಟ್ ನಲ್ಲಿ ಭಾರಿ ಇಳಿಕೆ

ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಗಂಧದಗುಡಿ ಟಿಕೆಟ್‌ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ. ಈ ವಿಷಯವನ್ನು ಸ್ವತಃ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹಂಚಿಕೊಂಡಿದ್ದಾರೆ.

ಗಂಧದಗುಡಿ ಸಿನಿಮಾ ಟಿಕೆಟ್‌ ದರ ಇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪುನೀತ್‌ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಮಾಹಿತಿ ನೀಡಿದ್ದು, ನವೆಂಬರ್​​ 7ರಿಂದ 10ರವರೆಗೆ ರಾಜ್ಯಾದ್ಯಂತ ಸಿಂಗಲ್‌ ಸ್ಕ್ರೀನ್‌ ಥಿಯೇಟರ್​ಗಳಲ್ಲಿ​ ‘ಗಂಧದಗುಡಿ’ ಚಿತ್ರದ ಹೊಸ ಟಿಕೆಟ್​ ದರ 56 ರೂ. ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನಗಳು ಇರಲಿದೆ ಎಂದು ಪ್ರಕಟಿಸಿದ್ದಾರೆ.

ಗಂಧದಗುಡಿ ಅಪ್ಪು ಅವರ ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಹಂಬಲ ಈ ಸಿನಿಮಾ ರೂಪುಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ಈ ಚಿತ್ರ ವೀಕ್ಷಣೆ ಮಾಡಬೇಕೆಂಬುದು.. ಈ ಸಲುವಾಗಿ ನಾನು ಮತ್ತು ಚಿತ್ರ ತಂಡದ ಎಲ್ಲರೊಡನೆ ಚರ್ಚಿಸಿ, ವಿತರಕರು ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಗಂಧದಗುಡಿಯನ್ನು ಸೋಮವಾರದಿಂದ ಗುರುವಾರದವರೆಗೆ ಸಿಂಗಲ್‌ ಸ್ಕ್ರೀನ್‌ ಥಿಯೇಟರ್​ಗಳಲ್ಲಿ​ 56 ರೂ. ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ ಎಂಬ ಸಂದೇಶವನ್ನೂ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಟ್ವಿಟರ್​ ಮತ್ತು ಫೇಸ್​ಬುಕ್​ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

8 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

9 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

9 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

9 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

10 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

10 hours ago