ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಗಂಧದಗುಡಿ ಟಿಕೆಟ್ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ. ಈ ವಿಷಯವನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ಕುಮಾರ್ ಹಂಚಿಕೊಂಡಿದ್ದಾರೆ.
ಗಂಧದಗುಡಿ ಸಿನಿಮಾ ಟಿಕೆಟ್ ದರ ಇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಮಾಹಿತಿ ನೀಡಿದ್ದು, ನವೆಂಬರ್ 7ರಿಂದ 10ರವರೆಗೆ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ ‘ಗಂಧದಗುಡಿ’ ಚಿತ್ರದ ಹೊಸ ಟಿಕೆಟ್ ದರ 56 ರೂ. ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನಗಳು ಇರಲಿದೆ ಎಂದು ಪ್ರಕಟಿಸಿದ್ದಾರೆ.
ಗಂಧದಗುಡಿ ಅಪ್ಪು ಅವರ ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಹಂಬಲ ಈ ಸಿನಿಮಾ ರೂಪುಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ಈ ಚಿತ್ರ ವೀಕ್ಷಣೆ ಮಾಡಬೇಕೆಂಬುದು.. ಈ ಸಲುವಾಗಿ ನಾನು ಮತ್ತು ಚಿತ್ರ ತಂಡದ ಎಲ್ಲರೊಡನೆ ಚರ್ಚಿಸಿ, ವಿತರಕರು ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಗಂಧದಗುಡಿಯನ್ನು ಸೋಮವಾರದಿಂದ ಗುರುವಾರದವರೆಗೆ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ 56 ರೂ. ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ ಎಂಬ ಸಂದೇಶವನ್ನೂ ಅಶ್ವಿನಿ ಪುನೀತ್ ರಾಜ್ಕುಮಾರ್ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…