ಚಿತ್ರ ಮಂಜರಿ

ಇಂದಿನಿಂದ 3 ದಿನಗಳ ಕಾಲ “ಗಂಧದಗುಡಿ” ಸಿನಿಮಾ ಟಿಕೆಟ್ ನಲ್ಲಿ ಭಾರಿ ಇಳಿಕೆ

ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಗಂಧದಗುಡಿ ಟಿಕೆಟ್‌ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ. ಈ ವಿಷಯವನ್ನು ಸ್ವತಃ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹಂಚಿಕೊಂಡಿದ್ದಾರೆ.

ಗಂಧದಗುಡಿ ಸಿನಿಮಾ ಟಿಕೆಟ್‌ ದರ ಇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪುನೀತ್‌ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಮಾಹಿತಿ ನೀಡಿದ್ದು, ನವೆಂಬರ್​​ 7ರಿಂದ 10ರವರೆಗೆ ರಾಜ್ಯಾದ್ಯಂತ ಸಿಂಗಲ್‌ ಸ್ಕ್ರೀನ್‌ ಥಿಯೇಟರ್​ಗಳಲ್ಲಿ​ ‘ಗಂಧದಗುಡಿ’ ಚಿತ್ರದ ಹೊಸ ಟಿಕೆಟ್​ ದರ 56 ರೂ. ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನಗಳು ಇರಲಿದೆ ಎಂದು ಪ್ರಕಟಿಸಿದ್ದಾರೆ.

ಗಂಧದಗುಡಿ ಅಪ್ಪು ಅವರ ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಹಂಬಲ ಈ ಸಿನಿಮಾ ರೂಪುಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ಈ ಚಿತ್ರ ವೀಕ್ಷಣೆ ಮಾಡಬೇಕೆಂಬುದು.. ಈ ಸಲುವಾಗಿ ನಾನು ಮತ್ತು ಚಿತ್ರ ತಂಡದ ಎಲ್ಲರೊಡನೆ ಚರ್ಚಿಸಿ, ವಿತರಕರು ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಗಂಧದಗುಡಿಯನ್ನು ಸೋಮವಾರದಿಂದ ಗುರುವಾರದವರೆಗೆ ಸಿಂಗಲ್‌ ಸ್ಕ್ರೀನ್‌ ಥಿಯೇಟರ್​ಗಳಲ್ಲಿ​ 56 ರೂ. ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ ಎಂಬ ಸಂದೇಶವನ್ನೂ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಟ್ವಿಟರ್​ ಮತ್ತು ಫೇಸ್​ಬುಕ್​ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

14 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

14 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

14 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

14 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago