ಚಿತ್ರ ಮಂಜರಿ

ಇಂದಿನಿಂದ ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ

ಸ್ಟಾರ್ ಸುವರ್ಣದಲ್ಲಿ ನವೆಂಬರ್ ೨೮ರಂದು (ಇಂದಿನಿಂದ) ಸೋಮವಾರದಿಂದ ಸಂಜೆ ೭ ಗಂಟೆಗೆ ಪ್ರಾರಂಭ

ಮೈಸೂರು: ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮುದ್ದು ಮಣಿಗಳು, ಮನಸೆಲ್ಲಾ ನೀನೇ, ಮರಳಿ ಮನಸಾಗಿದೆ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನ ಗೆದ್ದು ಮನೆ ಮಾತಾಗಿವೆ. ಇದೀಗ ಸ್ಟಾರ್ ಸುವರ್ಣ ವಾಹಿನಿಯು ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಪ್ರಾರಂಭಿಸಲು ಸಜ್ಜಾಗಿದೆ.
‘ಕಥೆಯೊಂದು ಶುರುವಾಗಿದೆ’ ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ಧೂರಿ ಧಾರಾವಾಹಿ. ಈ ಧಾರಾವಾಹಿಯ ಕಥಾನಾಯಕಿ ಕೃತಿ. ಈಕೆ ಮಧ್ಯಮ ಕುಟುಂಬದ ಹುಡುಗಿಯಾಗಿರುತ್ತಾಳೆ. ಈಕೆ ಎಷ್ಟೇ ಕಷ್ಟ ಬಂದ್ರು ನಗುತ್ತಾ ಮನೆ ನಿಭಾಯಿಸೋ ಛಲಗಾರ್ತಿ. ಸಮಾಜದಲ್ಲಿ ಮಹಿಳೆಯರು ಯಾವುದಕ್ಕೂ ಕಮ್ಮಿ ಇಲ್ಲ, ಗಂಡಿಗೆ ಸರಿ ಸಮಾನಾಗಿ ನಿಲ್ಲೋ ಸಾಮರ್ಥ್ಯ ಹೆಣ್ಣಿಗಿದೆ ಎಂದು ತೋರಿಸೋಕೆ ‘ಹೆಣ್ಮಕ್ಳೆ ಸ್ಟ್ರಾಂಗು ಗುರು’ ಎಂಬ ನಾಮಪದದ ಅಡಿ ಸಮಾಜದಲ್ಲಿರೋ ಹೆಣ್ಣು ಕುಲಕ್ಕೆ ಸ್ಛೂರ್ತಿಯಾಗಿ ನಿಲ್ತಿದ್ದಾಳೆ ನಮ್ಮ ಕೃತಿ.
ಇನ್ನು ಈ ಕಥೆಯ ನಾಯಕ ಯುವರಾಜ ಬಹದ್ದೂರ್. ಬಹದ್ದೂರ್ ಫ್ಯಾಮಿಲಿಗೆ ಇವನೇ ಹಿರಿಯ ಮಗ. ಆದರೆ, ಸ್ವಲ್ಪ ಅಹಂಕಾರಿ, ಇವನ ನಿರ್ಧಾರ ತುಂಬಾ ಅಚ್ಚುಕಟ್ಟು. ಇವನು ತುಂಬಾ ಕಟ್ಟುನಿಟ್ಟು. ಮಾತಲ್ಲಿ ಮನೆ ಕಟ್ದೇ ಕೆಲಸ ಮಾಡಿ ತೋರಿಸೋ ಇವನು ಕೆಲಸಕ್ಕೆ ತುಂಬಾ ಪ್ರಾಮುಖ್ಯತೆ ಕೊಡ್ತಾನೆ.
ಒಬ್ಬಳು ಸ್ವಾಭಿಮಾನಿ, ಇನ್ನೊಬ್ಬ ಅಹಂಕಾರಿ. ಸ್ವಾಭಿಮಾನಿ ಹಾಗೂ ಅಹಂಕಾರಿಗಳ ನಡುವೆ ನಡೆಯುವ ಜಿದ್ದಾಜಿದ್ದಿಯೇ ಈ ಧಾರಾವಾಹಿಯ ಕಥಾಹಂದರವಾಗಿದೆ. ಈ ಧಾರಾವಾಹಿಯ ತಾರಾ ಬಳಗದಲ್ಲಿ ಸುಂದಶ್ರೀ, ಸಹನಾ, ಅಭಿನಯ, ಭವಾನಿ, ಸುಜಾತ ಅಕ್ಷುಯ್‌, ಸುಜ್ಯ್‌, ಭವಿಶ್, ಇಂಚರ ಜೋಶಿ ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ. ಹೊಚ್ಚ ಹೊಸ ಧಾರಾವಾಹಿ ‘ಕಥೆಯೊಂದು ಶುರುವಾಗಿದೆ’ ಇದೇ ನವೆಂಬರ್ ೨೮ರಂದು ಸೋಮವಾರದಿಂದ ಸಂಜೆ ೭ ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

5 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

5 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

5 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

6 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

7 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

7 hours ago