ಸ್ಟಾರ್ ಸುವರ್ಣದಲ್ಲಿ ನವೆಂಬರ್ ೨೮ರಂದು (ಇಂದಿನಿಂದ) ಸೋಮವಾರದಿಂದ ಸಂಜೆ ೭ ಗಂಟೆಗೆ ಪ್ರಾರಂಭ
ಮೈಸೂರು: ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮುದ್ದು ಮಣಿಗಳು, ಮನಸೆಲ್ಲಾ ನೀನೇ, ಮರಳಿ ಮನಸಾಗಿದೆ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನ ಗೆದ್ದು ಮನೆ ಮಾತಾಗಿವೆ. ಇದೀಗ ಸ್ಟಾರ್ ಸುವರ್ಣ ವಾಹಿನಿಯು ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಪ್ರಾರಂಭಿಸಲು ಸಜ್ಜಾಗಿದೆ.
‘ಕಥೆಯೊಂದು ಶುರುವಾಗಿದೆ’ ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ಧೂರಿ ಧಾರಾವಾಹಿ. ಈ ಧಾರಾವಾಹಿಯ ಕಥಾನಾಯಕಿ ಕೃತಿ. ಈಕೆ ಮಧ್ಯಮ ಕುಟುಂಬದ ಹುಡುಗಿಯಾಗಿರುತ್ತಾಳೆ. ಈಕೆ ಎಷ್ಟೇ ಕಷ್ಟ ಬಂದ್ರು ನಗುತ್ತಾ ಮನೆ ನಿಭಾಯಿಸೋ ಛಲಗಾರ್ತಿ. ಸಮಾಜದಲ್ಲಿ ಮಹಿಳೆಯರು ಯಾವುದಕ್ಕೂ ಕಮ್ಮಿ ಇಲ್ಲ, ಗಂಡಿಗೆ ಸರಿ ಸಮಾನಾಗಿ ನಿಲ್ಲೋ ಸಾಮರ್ಥ್ಯ ಹೆಣ್ಣಿಗಿದೆ ಎಂದು ತೋರಿಸೋಕೆ ‘ಹೆಣ್ಮಕ್ಳೆ ಸ್ಟ್ರಾಂಗು ಗುರು’ ಎಂಬ ನಾಮಪದದ ಅಡಿ ಸಮಾಜದಲ್ಲಿರೋ ಹೆಣ್ಣು ಕುಲಕ್ಕೆ ಸ್ಛೂರ್ತಿಯಾಗಿ ನಿಲ್ತಿದ್ದಾಳೆ ನಮ್ಮ ಕೃತಿ.
ಇನ್ನು ಈ ಕಥೆಯ ನಾಯಕ ಯುವರಾಜ ಬಹದ್ದೂರ್. ಬಹದ್ದೂರ್ ಫ್ಯಾಮಿಲಿಗೆ ಇವನೇ ಹಿರಿಯ ಮಗ. ಆದರೆ, ಸ್ವಲ್ಪ ಅಹಂಕಾರಿ, ಇವನ ನಿರ್ಧಾರ ತುಂಬಾ ಅಚ್ಚುಕಟ್ಟು. ಇವನು ತುಂಬಾ ಕಟ್ಟುನಿಟ್ಟು. ಮಾತಲ್ಲಿ ಮನೆ ಕಟ್ದೇ ಕೆಲಸ ಮಾಡಿ ತೋರಿಸೋ ಇವನು ಕೆಲಸಕ್ಕೆ ತುಂಬಾ ಪ್ರಾಮುಖ್ಯತೆ ಕೊಡ್ತಾನೆ.
ಒಬ್ಬಳು ಸ್ವಾಭಿಮಾನಿ, ಇನ್ನೊಬ್ಬ ಅಹಂಕಾರಿ. ಸ್ವಾಭಿಮಾನಿ ಹಾಗೂ ಅಹಂಕಾರಿಗಳ ನಡುವೆ ನಡೆಯುವ ಜಿದ್ದಾಜಿದ್ದಿಯೇ ಈ ಧಾರಾವಾಹಿಯ ಕಥಾಹಂದರವಾಗಿದೆ. ಈ ಧಾರಾವಾಹಿಯ ತಾರಾ ಬಳಗದಲ್ಲಿ ಸುಂದಶ್ರೀ, ಸಹನಾ, ಅಭಿನಯ, ಭವಾನಿ, ಸುಜಾತ ಅಕ್ಷುಯ್, ಸುಜ್ಯ್, ಭವಿಶ್, ಇಂಚರ ಜೋಶಿ ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ. ಹೊಚ್ಚ ಹೊಸ ಧಾರಾವಾಹಿ ‘ಕಥೆಯೊಂದು ಶುರುವಾಗಿದೆ’ ಇದೇ ನವೆಂಬರ್ ೨೮ರಂದು ಸೋಮವಾರದಿಂದ ಸಂಜೆ ೭ ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…