ಚಿತ್ರ ಮಂಜರಿ

ಮಧ್ಯಾಹ್ನ 3 30 ಕ್ಕೆ ನಟಿ ಲೀಲಾವತಿ ಅಂತ್ಯ ಸಂಸ್ಕಾರ

ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್‌ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು.ಈ ವರೆಗೆ ಹಲವಾರು ಅಭಿಮಾನಿಗಳು, ಕಲಾವಿದರು, ತಂತ್ರಜ್ಞರು ಸೇರಿದಂತೆ ನೂರಾರು ಮಂದಿ ಅಗಲಿದ ತಾರೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.

10 ಗಂಟೆಯ ನಂತರ ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಹಾಗೂ ನಟ ನಟಿಯರು ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.

ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ನೆನ್ನೆ ಕೊನೆಯುಸಿರೆಳೆದ್ದಾರೆ. ಕನ್ನಡದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಇತರೆ ಭಾಷೆಗಳೂ ಸೇರಿದಂತೆ ಒಟ್ಟು 600ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ್ದ ನಟಿ ಲೀಲಾವತಿ ಆರನೇ ವರ್ಷಕ್ಕೆ ತನ್ನ ಪೋಷಕರನ್ನು ಕಳೆದುಕೊಂಡಿದ್ದರು. ಇದೀಗ ಬಾರದ ಲೋಕಕ್ಕೆ ಪಯಣ ಬೆಳೆಸಿರುವ ಲೀಲಾವತಿ ತಮ್ಮ ಒಬ್ಬನೇ ಮಗ ವಿನೋದ್‌ರಾಜ್‌ಅವರನ್ನು ಅಗಲಿದ್ದಾರೆ.

ಚಂಚಲ ಕುಮಾರಿ ಎಂಬ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಪಡೆದ ಲೀಲಾವತಿ ನಾಗ ಕನ್ನಿಕಾ, 1958ರ ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ಧರ್ಮ ವಿಜಯ ಹಾಗೂ ರಣಧೀರ ಕಂಠೀರವ ಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ನಿರ್ವಹಿಸಿದ್ದರು. ಮಹಾಲಿಂಗ ಭಾಗವತರ ಶ್ರೀ ಸಾಹಿತ್ಯ ಸಾಮ್ರಾಜ್ಯ ಡ್ರಾಮಾ ಕಂಪನಿಯಲ್ಲಿಯೂ ಕೆಲಸ ಮಾಡಿದ್ದ ಲೀಲಾವತಿ 1960ರಲ್ಲಿ ತೆರೆಗೆ ಬಂದಿದ್ದ ರಾಣಿ ಹೊನ್ನಮ್ಮ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾದರು.

lokesh

Recent Posts

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

49 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

6 hours ago