ಚಿತ್ರ ಮಂಜರಿ

ಮಧ್ಯಾಹ್ನ 3 30 ಕ್ಕೆ ನಟಿ ಲೀಲಾವತಿ ಅಂತ್ಯ ಸಂಸ್ಕಾರ

ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್‌ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು.ಈ ವರೆಗೆ ಹಲವಾರು ಅಭಿಮಾನಿಗಳು, ಕಲಾವಿದರು, ತಂತ್ರಜ್ಞರು ಸೇರಿದಂತೆ ನೂರಾರು ಮಂದಿ ಅಗಲಿದ ತಾರೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.

10 ಗಂಟೆಯ ನಂತರ ಪಾರ್ಥೀವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಹಾಗೂ ನಟ ನಟಿಯರು ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.

ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ನೆನ್ನೆ ಕೊನೆಯುಸಿರೆಳೆದ್ದಾರೆ. ಕನ್ನಡದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಇತರೆ ಭಾಷೆಗಳೂ ಸೇರಿದಂತೆ ಒಟ್ಟು 600ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. 

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ್ದ ನಟಿ ಲೀಲಾವತಿ ಆರನೇ ವರ್ಷಕ್ಕೆ ತನ್ನ ಪೋಷಕರನ್ನು ಕಳೆದುಕೊಂಡಿದ್ದರು. ಇದೀಗ ಬಾರದ ಲೋಕಕ್ಕೆ ಪಯಣ ಬೆಳೆಸಿರುವ ಲೀಲಾವತಿ ತಮ್ಮ ಒಬ್ಬನೇ ಮಗ ವಿನೋದ್‌ರಾಜ್‌ಅವರನ್ನು ಅಗಲಿದ್ದಾರೆ.

ಚಂಚಲ ಕುಮಾರಿ ಎಂಬ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಪಡೆದ ಲೀಲಾವತಿ ನಾಗ ಕನ್ನಿಕಾ, 1958ರ ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ಧರ್ಮ ವಿಜಯ ಹಾಗೂ ರಣಧೀರ ಕಂಠೀರವ ಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ನಿರ್ವಹಿಸಿದ್ದರು. ಮಹಾಲಿಂಗ ಭಾಗವತರ ಶ್ರೀ ಸಾಹಿತ್ಯ ಸಾಮ್ರಾಜ್ಯ ಡ್ರಾಮಾ ಕಂಪನಿಯಲ್ಲಿಯೂ ಕೆಲಸ ಮಾಡಿದ್ದ ಲೀಲಾವತಿ 1960ರಲ್ಲಿ ತೆರೆಗೆ ಬಂದಿದ್ದ ರಾಣಿ ಹೊನ್ನಮ್ಮ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

10 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago