ಚಿತ್ರ ಮಂಜರಿ

ಅಪ್ಪು ಅವರ ‘ಗಂಧದ ಗುಡಿ’ ಸಿನಿಮಾ ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ :ಸಂದೇಶ್ ಸ್ವಾಮಿ

ಬೆಂಗಳೂರು : ಅಪ್ಪು ಕನಸಿನ ‘ಗಂಧದ ಗುಡಿ’ ಅವರು ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ. ನಮ್ಮ ಕರುನಾಡಿನ ಪ್ರಕೃತಿ ಸಂಪತ್ತು, ವನ್ಯ ಜೀವಸಂಕುಲದ ಬಗ್ಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಸ್ಟಾರ್ ನಟನಾಗಿದ್ದರೂ ದಟ್ಟ ಕಾನನ, ಬೆಟ್ಟಗುಡ್ಡಗಳಲ್ಲಿ ಅಪಾಯವನ್ನು ಲೆಕ್ಕಿಸದೆ ಚಿತ್ರೀಕರಣ ಮಾಡಿರುವುದು ಆದರ್ಶನೀಯ ಎಂದು ಮಾಜಿ ಮೇಯರ್ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ಸ್ವಾಮಿ ಅವರು ಸಿನಿಮಾ ಕುರಿತು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಮುಂದುವರಿದು ಗಂಧದ ಗುಡಿ ಸಿನಿಮಾ ಅದ್ಬುತವಾಗಿ ಮೂಡಿ ಬಂದಿರುವ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಲೇಬೇಕು. ಅದರಲ್ಲೂ ಮಕ್ಕಳು, ಯುವ ಸಮುದಾಯ ತಪ್ಪದೆ ನೋಡಬೇಕು. ಸಾಧ್ಯವಾದರೆ ಸರ್ಕಾರದ ಮೂಲಕ ಥಿಯೇಟರ್ ಗಳನ್ನು ಬುಕ್ ಮಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡಬೇಕು. ಇದನ್ನು ಶೈಕ್ಷಣಿಕ ಚಟುವಟಿಕೆಯಾಗಿ ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago