ಬೆಂಗಳೂರು : ಅಪ್ಪು ಕನಸಿನ ‘ಗಂಧದ ಗುಡಿ’ ಅವರು ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ. ನಮ್ಮ ಕರುನಾಡಿನ ಪ್ರಕೃತಿ ಸಂಪತ್ತು, ವನ್ಯ ಜೀವಸಂಕುಲದ ಬಗ್ಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಸ್ಟಾರ್ ನಟನಾಗಿದ್ದರೂ ದಟ್ಟ ಕಾನನ, ಬೆಟ್ಟಗುಡ್ಡಗಳಲ್ಲಿ ಅಪಾಯವನ್ನು ಲೆಕ್ಕಿಸದೆ ಚಿತ್ರೀಕರಣ ಮಾಡಿರುವುದು ಆದರ್ಶನೀಯ ಎಂದು ಮಾಜಿ ಮೇಯರ್ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ಸ್ವಾಮಿ ಅವರು ಸಿನಿಮಾ ಕುರಿತು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಮುಂದುವರಿದು ಗಂಧದ ಗುಡಿ ಸಿನಿಮಾ ಅದ್ಬುತವಾಗಿ ಮೂಡಿ ಬಂದಿರುವ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಲೇಬೇಕು. ಅದರಲ್ಲೂ ಮಕ್ಕಳು, ಯುವ ಸಮುದಾಯ ತಪ್ಪದೆ ನೋಡಬೇಕು. ಸಾಧ್ಯವಾದರೆ ಸರ್ಕಾರದ ಮೂಲಕ ಥಿಯೇಟರ್ ಗಳನ್ನು ಬುಕ್ ಮಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡಬೇಕು. ಇದನ್ನು ಶೈಕ್ಷಣಿಕ ಚಟುವಟಿಕೆಯಾಗಿ ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…