ಚಿತ್ರ ಮಂಜರಿ

ಗಾಂಧಿವಾದವನ್ನು ಕಿತ್ತೊಗೆಯಬೇಕು : ಚೇತನ್‌ ಅಹಿಂಸ

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌ ಅಹಿಂಸ ಗಾಂಧಿಯವರ ʼಧಾರ್ಮಿಕ ಸಾಮರಸ್ಯʼ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್‌ 25) ಸಾರ್ವಜನಿಕವಾಗಿ, ನಾವು ಜಾತ್ಯಾತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ
ʼಧಾರ್ಮಿಕ ಸಾಮರಸ್ಯʼ ಎಂದರೆ ಅಸಮಾನತೆಯ ಸಂರಕ್ಷಣೆ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಟ ಚೇತನ್‌ ಅಹಿಂಸ  ನಟ ಚೇತನ್‌ ಅವರು ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್‌ ಜೊತೆಗೆ ಗಾಂಧೀಜಿ ಫೋಟೊವನ್ನು ಸಹ ತೆರವುಗೊಳಿಸಬೇಕು ಎಂದು ಹೇಳಿದ್ದರು.
ಪ್ರಿಯಾಂಕ್‌ ಖರ್ಗೆ ಹೇಳುತ್ತಾರೆ ಸುವರ್ಣಸೌಧ ಸಾವರ್ಕರ್‌ ಫೋಟೊ ತೆಗೆದರೆ ಸೂಕ್ತ. ಅದನ್ನು ಬಿಟ್ಟೆ ಇವತ್ತೇ ತೆಗೆಯುತ್ತೇನೆʼ
ಕಾಂಗ್ರೆಸ್‌ ಮತ್ತು ಖರ್ಗೆಯವರಿಗೆ ಸಾವರ್ಕರ್‌ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತಹ ಸಮಾನತಾವಾದಿಗಳಿಗೆ, ಸಾವರ್ಕರ್‌ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು.
ನೀವು ಸಾವರ್ಕರ್‌ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್‌ ಅವರ ಭಾವಚಿತ್ರವನ್ನು ಸೇರಿಸಿ ಎಂದಿದ್ದರು.
lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago