ಚಿತ್ರ ಮಂಜರಿ

ಗಾಂಧಿವಾದವನ್ನು ಕಿತ್ತೊಗೆಯಬೇಕು : ಚೇತನ್‌ ಅಹಿಂಸ

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌ ಅಹಿಂಸ ಗಾಂಧಿಯವರ ʼಧಾರ್ಮಿಕ ಸಾಮರಸ್ಯʼ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್‌ 25) ಸಾರ್ವಜನಿಕವಾಗಿ, ನಾವು ಜಾತ್ಯಾತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ
ʼಧಾರ್ಮಿಕ ಸಾಮರಸ್ಯʼ ಎಂದರೆ ಅಸಮಾನತೆಯ ಸಂರಕ್ಷಣೆ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಟ ಚೇತನ್‌ ಅಹಿಂಸ  ನಟ ಚೇತನ್‌ ಅವರು ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್‌ ಜೊತೆಗೆ ಗಾಂಧೀಜಿ ಫೋಟೊವನ್ನು ಸಹ ತೆರವುಗೊಳಿಸಬೇಕು ಎಂದು ಹೇಳಿದ್ದರು.
ಪ್ರಿಯಾಂಕ್‌ ಖರ್ಗೆ ಹೇಳುತ್ತಾರೆ ಸುವರ್ಣಸೌಧ ಸಾವರ್ಕರ್‌ ಫೋಟೊ ತೆಗೆದರೆ ಸೂಕ್ತ. ಅದನ್ನು ಬಿಟ್ಟೆ ಇವತ್ತೇ ತೆಗೆಯುತ್ತೇನೆʼ
ಕಾಂಗ್ರೆಸ್‌ ಮತ್ತು ಖರ್ಗೆಯವರಿಗೆ ಸಾವರ್ಕರ್‌ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತಹ ಸಮಾನತಾವಾದಿಗಳಿಗೆ, ಸಾವರ್ಕರ್‌ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು.
ನೀವು ಸಾವರ್ಕರ್‌ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್‌ ಅವರ ಭಾವಚಿತ್ರವನ್ನು ಸೇರಿಸಿ ಎಂದಿದ್ದರು.
lokesh

Recent Posts

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

36 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

1 hour ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

1 hour ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago