ಚಿತ್ರ ಮಂಜರಿ

ಗಾಂಧಿವಾದವನ್ನು ಕಿತ್ತೊಗೆಯಬೇಕು : ಚೇತನ್‌ ಅಹಿಂಸ

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌ ಅಹಿಂಸ ಗಾಂಧಿಯವರ ʼಧಾರ್ಮಿಕ ಸಾಮರಸ್ಯʼ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್‌ 25) ಸಾರ್ವಜನಿಕವಾಗಿ, ನಾವು ಜಾತ್ಯಾತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ
ʼಧಾರ್ಮಿಕ ಸಾಮರಸ್ಯʼ ಎಂದರೆ ಅಸಮಾನತೆಯ ಸಂರಕ್ಷಣೆ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಟ ಚೇತನ್‌ ಅಹಿಂಸ  ನಟ ಚೇತನ್‌ ಅವರು ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್‌ ಜೊತೆಗೆ ಗಾಂಧೀಜಿ ಫೋಟೊವನ್ನು ಸಹ ತೆರವುಗೊಳಿಸಬೇಕು ಎಂದು ಹೇಳಿದ್ದರು.
ಪ್ರಿಯಾಂಕ್‌ ಖರ್ಗೆ ಹೇಳುತ್ತಾರೆ ಸುವರ್ಣಸೌಧ ಸಾವರ್ಕರ್‌ ಫೋಟೊ ತೆಗೆದರೆ ಸೂಕ್ತ. ಅದನ್ನು ಬಿಟ್ಟೆ ಇವತ್ತೇ ತೆಗೆಯುತ್ತೇನೆʼ
ಕಾಂಗ್ರೆಸ್‌ ಮತ್ತು ಖರ್ಗೆಯವರಿಗೆ ಸಾವರ್ಕರ್‌ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತಹ ಸಮಾನತಾವಾದಿಗಳಿಗೆ, ಸಾವರ್ಕರ್‌ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು.
ನೀವು ಸಾವರ್ಕರ್‌ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್‌ ಅವರ ಭಾವಚಿತ್ರವನ್ನು ಸೇರಿಸಿ ಎಂದಿದ್ದರು.
lokesh

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago