ಚಿತ್ರ ಮಂಜರಿ

ಗಾಂಧಿವಾದವನ್ನು ಕಿತ್ತೊಗೆಯಬೇಕು : ಚೇತನ್‌ ಅಹಿಂಸ

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌ ಅಹಿಂಸ ಗಾಂಧಿಯವರ ʼಧಾರ್ಮಿಕ ಸಾಮರಸ್ಯʼ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್‌ 25) ಸಾರ್ವಜನಿಕವಾಗಿ, ನಾವು ಜಾತ್ಯಾತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ
ʼಧಾರ್ಮಿಕ ಸಾಮರಸ್ಯʼ ಎಂದರೆ ಅಸಮಾನತೆಯ ಸಂರಕ್ಷಣೆ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಟ ಚೇತನ್‌ ಅಹಿಂಸ  ನಟ ಚೇತನ್‌ ಅವರು ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್‌ ಜೊತೆಗೆ ಗಾಂಧೀಜಿ ಫೋಟೊವನ್ನು ಸಹ ತೆರವುಗೊಳಿಸಬೇಕು ಎಂದು ಹೇಳಿದ್ದರು.
ಪ್ರಿಯಾಂಕ್‌ ಖರ್ಗೆ ಹೇಳುತ್ತಾರೆ ಸುವರ್ಣಸೌಧ ಸಾವರ್ಕರ್‌ ಫೋಟೊ ತೆಗೆದರೆ ಸೂಕ್ತ. ಅದನ್ನು ಬಿಟ್ಟೆ ಇವತ್ತೇ ತೆಗೆಯುತ್ತೇನೆʼ
ಕಾಂಗ್ರೆಸ್‌ ಮತ್ತು ಖರ್ಗೆಯವರಿಗೆ ಸಾವರ್ಕರ್‌ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತಹ ಸಮಾನತಾವಾದಿಗಳಿಗೆ, ಸಾವರ್ಕರ್‌ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು.
ನೀವು ಸಾವರ್ಕರ್‌ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್‌ ಅವರ ಭಾವಚಿತ್ರವನ್ನು ಸೇರಿಸಿ ಎಂದಿದ್ದರು.
lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

6 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

16 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

21 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

21 hours ago