ಶಿವ ಪಿನಾಕವನ್ನು ಹಿಡಿದಿರುವುದರಿಂದ ಅವನಿಗೆ ಪಿನಾಕಪಾಣಿ ಎಂದು ಹೆಸರಾಯಿತು. ಶಿವನ ಕೈಲಿರುವ ಈ ಆಯುಧ ತ್ರಿಶೂಲ ಎಂದೂ ಹೇಳಲಾಗುತ್ತಿದೆ. ಬಿಲ್ಲು ಎಂದೂ ಇದೆ. ಮಯಾಸುರನ ತ್ರಿಪುರಗಳನ್ನು ನಾಶ ಮಾಡಲು ಶಿವ ಬಳಸಿದ ಆಯುಧ ಇದು ಎನ್ನುವುದಾಗಿ ಹೇಳಲಾಗುತ್ತದೆ. ಇಲ್ಲಿ ‘ಪಿನಾಕ’ದ ಪ್ರಸ್ತಾಪಕ್ಕೆ ಕಾರಣ ಆ ಹೆಸರಿನ ಚಿತ್ರ. ಗಣೇಶ್ ಅಭಿನಯದ ಹೊಸ ಚಿತ್ರದ ಹೆಸರಿದು. ಕ್ಷುದ್ರ ಶಕ್ತಿಗಳ ವಿರುದ್ಧದ ರುದ್ರ ನರ್ತನದ ಮೂಲ ಕಥಾವಸ್ತುವುಳ್ಳ ಚಿತ್ರದ ಹೆಸರಿನ ಟೀಸರ್ ನಿನ್ನೆ ಬಿಡುಗಡೆಯಾಗಿದೆ. ಗಣೇಶ್ ಮುಖ್ಯಭೂಮಿಕೆಯ ಈ ಚಿತ್ರ ಮುಂದಿನ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿದೆ.

ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ನಾಲ್ಕು ಕೇಂದ್ರಗಳಲ್ಲಿ ೧೦೦ ದಿನಗಳನ್ನು ಪೂರೈಸಿದೆ. ಅಷ್ಟೇ ಅಲ್ಲ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದು ೧೦೦ ದಿನ ಪೂರೈಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಗಣೇಶ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಕನ್ನಡದಲ್ಲಿ ನಿರ್ಮಿಸುತ್ತಿರುವ ನಾಲ್ಕನೇ ಚಿತ್ರದಲ್ಲಿ ಗಣೇಶ್ ಕೇಂದ್ರ ಪಾತ್ರಧಾರಿ. ಚಿತ್ರದ ಶೀರ್ಷಿಕೆಯ ಟೀಸರ್ ಇದು ಗಣೇಶ್ ಅಭಿನಯದ ವಿಭಿನ್ನ ಚಿತ್ರವಾಗಲಿದೆ ಎನ್ನುವುದನ್ನು ಹೇಳಿತ್ತು. ಸಂಸ್ಥೆ ನಿರ್ಮಿಸುತ್ತಿರುವ ೪೯ನೇ ಚಿತ್ರವಿದು.

ಕೆಲವು ದಿನಗಳ ಹಿಂದೆ ಶ್ರೀಮುರಳಿ ಅಭಿನಯದಲ್ಲಿ  ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಿಂದ ಹೊಸ ಚಿತ್ರವೊಂದರ ಘೋಷಣೆಯಾಗಿತ್ತು. ಅಧ್ಯಕ್ಷ ಇನ್ ಅಮೆರಿಕ ಈ ಸಂಸ್ಥೆಯದು.

ಶಿವರಾಜ್‌ಕುಮಾರ್ ಅಭಿನಯದ ಚಿತ್ರವೊಂದು ಈ ವರ್ಷದಲ್ಲೇ ಆರಂಭವಾಗಲಿದೆ. ಕನ್ನಡದ ಎಲ್ಲ ಜನಪ್ರಿಯ ನಟರ ಜೊತೆ ಚಿತ್ರ ನಿರ್ಮಿಸಲಿರುವ ಈ ಸಂಸ್ಥೆ ತೆಲುಗಿನಲ್ಲಿ ‘ಕಾರ್ತಿಕೇಯ ೨’, ‘ವೆಂಕಿ ಮಾಮಾ’, ಓ ಬೇಬಿ’, ‘ಧಮಾಕಾ’ ಮುಂತಾದ ಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ‘ಪಿನಾಕ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಂಸ್ಥೆಯ ಐವತ್ತನೇ ಚಿತ್ರ ಪ್ಯಾನ್ ಗ್ಲೋಬಲ್ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಟಿ.ಜಿ.ವಿಶ್ವಪ್ರಸಾದ್. ‘ಪಿನಾಕ’ ಚಿತ್ರದ ಮೂಲಕ ನೃತ್ಯ ಸಂಯೋಜಕ ಧನಂಜಯ್ ಅಲಿಯಾಸ್ ಧನು ಮಾಸ್ಟರ್ ನಿರ್ದೇಶಕರಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

7 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

28 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago