ಶಿವ ಪಿನಾಕವನ್ನು ಹಿಡಿದಿರುವುದರಿಂದ ಅವನಿಗೆ ಪಿನಾಕಪಾಣಿ ಎಂದು ಹೆಸರಾಯಿತು. ಶಿವನ ಕೈಲಿರುವ ಈ ಆಯುಧ ತ್ರಿಶೂಲ ಎಂದೂ ಹೇಳಲಾಗುತ್ತಿದೆ. ಬಿಲ್ಲು ಎಂದೂ ಇದೆ. ಮಯಾಸುರನ ತ್ರಿಪುರಗಳನ್ನು ನಾಶ ಮಾಡಲು ಶಿವ ಬಳಸಿದ ಆಯುಧ ಇದು ಎನ್ನುವುದಾಗಿ ಹೇಳಲಾಗುತ್ತದೆ. ಇಲ್ಲಿ ‘ಪಿನಾಕ’ದ ಪ್ರಸ್ತಾಪಕ್ಕೆ ಕಾರಣ ಆ ಹೆಸರಿನ ಚಿತ್ರ. ಗಣೇಶ್ ಅಭಿನಯದ ಹೊಸ ಚಿತ್ರದ ಹೆಸರಿದು. ಕ್ಷುದ್ರ ಶಕ್ತಿಗಳ ವಿರುದ್ಧದ ರುದ್ರ ನರ್ತನದ ಮೂಲ ಕಥಾವಸ್ತುವುಳ್ಳ ಚಿತ್ರದ ಹೆಸರಿನ ಟೀಸರ್ ನಿನ್ನೆ ಬಿಡುಗಡೆಯಾಗಿದೆ. ಗಣೇಶ್ ಮುಖ್ಯಭೂಮಿಕೆಯ ಈ ಚಿತ್ರ ಮುಂದಿನ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿದೆ.

ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ನಾಲ್ಕು ಕೇಂದ್ರಗಳಲ್ಲಿ ೧೦೦ ದಿನಗಳನ್ನು ಪೂರೈಸಿದೆ. ಅಷ್ಟೇ ಅಲ್ಲ, ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದು ೧೦೦ ದಿನ ಪೂರೈಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಗಣೇಶ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಕನ್ನಡದಲ್ಲಿ ನಿರ್ಮಿಸುತ್ತಿರುವ ನಾಲ್ಕನೇ ಚಿತ್ರದಲ್ಲಿ ಗಣೇಶ್ ಕೇಂದ್ರ ಪಾತ್ರಧಾರಿ. ಚಿತ್ರದ ಶೀರ್ಷಿಕೆಯ ಟೀಸರ್ ಇದು ಗಣೇಶ್ ಅಭಿನಯದ ವಿಭಿನ್ನ ಚಿತ್ರವಾಗಲಿದೆ ಎನ್ನುವುದನ್ನು ಹೇಳಿತ್ತು. ಸಂಸ್ಥೆ ನಿರ್ಮಿಸುತ್ತಿರುವ ೪೯ನೇ ಚಿತ್ರವಿದು.

ಕೆಲವು ದಿನಗಳ ಹಿಂದೆ ಶ್ರೀಮುರಳಿ ಅಭಿನಯದಲ್ಲಿ  ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಿಂದ ಹೊಸ ಚಿತ್ರವೊಂದರ ಘೋಷಣೆಯಾಗಿತ್ತು. ಅಧ್ಯಕ್ಷ ಇನ್ ಅಮೆರಿಕ ಈ ಸಂಸ್ಥೆಯದು.

ಶಿವರಾಜ್‌ಕುಮಾರ್ ಅಭಿನಯದ ಚಿತ್ರವೊಂದು ಈ ವರ್ಷದಲ್ಲೇ ಆರಂಭವಾಗಲಿದೆ. ಕನ್ನಡದ ಎಲ್ಲ ಜನಪ್ರಿಯ ನಟರ ಜೊತೆ ಚಿತ್ರ ನಿರ್ಮಿಸಲಿರುವ ಈ ಸಂಸ್ಥೆ ತೆಲುಗಿನಲ್ಲಿ ‘ಕಾರ್ತಿಕೇಯ ೨’, ‘ವೆಂಕಿ ಮಾಮಾ’, ಓ ಬೇಬಿ’, ‘ಧಮಾಕಾ’ ಮುಂತಾದ ಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ‘ಪಿನಾಕ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಂಸ್ಥೆಯ ಐವತ್ತನೇ ಚಿತ್ರ ಪ್ಯಾನ್ ಗ್ಲೋಬಲ್ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಟಿ.ಜಿ.ವಿಶ್ವಪ್ರಸಾದ್. ‘ಪಿನಾಕ’ ಚಿತ್ರದ ಮೂಲಕ ನೃತ್ಯ ಸಂಯೋಜಕ ಧನಂಜಯ್ ಅಲಿಯಾಸ್ ಧನು ಮಾಸ್ಟರ್ ನಿರ್ದೇಶಕರಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

7 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago