ಚಿತ್ರ ಮಂಜರಿ

ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ನಟಿ ಗಾಯತ್ರಿ ರಘುರಾಮ್

ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 ವರ್ಷಗಳ ಪ್ರಾರ್ಥನೆ ಆಗಿತ್ತಂತೆ. ಈಗ ಅದು ಈಡೇರಿದೆ. ವಾರದ ಹಿಂದೆಯಷ್ಟೇ ಉದ್ದನೆಯ ಜಡೆಯ ಫೋಟೋ ಹಾಕಿದ್ದ ಗಾಯತ್ರಿ ಇದೀಗ ಮುಡಿಕೊಟ್ಟ ಫೋಟೋ ಶೇರ್ ಮಾಡಿದ್ದಾರೆ.

ತಮಿಳು ಚಿತ್ರೋದ್ಯಮದಲ್ಲಿ ಸ್ಟಾರ್ ನಟಿ ಎಂದೇ ಗುರುತಿಸಿಕೊಂಡಿದ್ದ ಗಾಯತ್ರಿ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೂ ಬಣ್ಣ ಹಚ್ಚಿದ್ದಾರೆ. ಹಲವಾರು ಯಶಸ್ವಿ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಕೇವಲ ನಟಿ ಮಾತ್ರವಲ್ಲ, ನಿರ್ಮಾಪಕಿ, ಕೊರಿಗೋಗ್ರಾಫರ್, ನಿರ್ದೇಶಕಿಯಾಗಿಯೂ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ.

2006ರಲ್ಲಿ ದೀಪಕ್ ಚಂದ್ರಶೇಖರ್ ಜೊತೆ ಹೊಸ ಬದುಕಿಗೆ ಕಾಲಿಟ್ಟವರು ಅಲ್ಲಿಯೂ ಹೆಚ್ಚು ದಿನ ಉಳಿಯಲಿಲ್ಲ. ಮದುವೆಯಾದ ಕೇವಲ ನಾಲ್ಕೇ ನಾಲ್ಕು ವರ್ಷಕ್ಕೆ ಅವರಿಂದ ದೂರವಾದರು. ಎರಡು ವರ್ಷಗಳ ಹಿಂದೆಯಷ್ಟೇ ಚಿತ್ರೋದ್ಯಮಕ್ಕೆ ಗುಡ್ ಬೈ ಹೇಳಿದ್ದರು. ನಂತರ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

ಆನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡು, ಪಕ್ಷ ಕಟ್ಟಲು ಮುಂದಾದರು. ಪಕ್ಷದ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ನಂತರ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಲೆ ಆರೋಪ ಮಾಡಿ ರಾಜೀನಾಮೆ ಕೂಡ ನೀಡಿದ್ದರು.

lokesh

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

2 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

3 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

3 hours ago