ಚಿತ್ರ ಮಂಜರಿ

ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ನಟಿ ಗಾಯತ್ರಿ ರಘುರಾಮ್

ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 ವರ್ಷಗಳ ಪ್ರಾರ್ಥನೆ ಆಗಿತ್ತಂತೆ. ಈಗ ಅದು ಈಡೇರಿದೆ. ವಾರದ ಹಿಂದೆಯಷ್ಟೇ ಉದ್ದನೆಯ ಜಡೆಯ ಫೋಟೋ ಹಾಕಿದ್ದ ಗಾಯತ್ರಿ ಇದೀಗ ಮುಡಿಕೊಟ್ಟ ಫೋಟೋ ಶೇರ್ ಮಾಡಿದ್ದಾರೆ.

ತಮಿಳು ಚಿತ್ರೋದ್ಯಮದಲ್ಲಿ ಸ್ಟಾರ್ ನಟಿ ಎಂದೇ ಗುರುತಿಸಿಕೊಂಡಿದ್ದ ಗಾಯತ್ರಿ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೂ ಬಣ್ಣ ಹಚ್ಚಿದ್ದಾರೆ. ಹಲವಾರು ಯಶಸ್ವಿ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಕೇವಲ ನಟಿ ಮಾತ್ರವಲ್ಲ, ನಿರ್ಮಾಪಕಿ, ಕೊರಿಗೋಗ್ರಾಫರ್, ನಿರ್ದೇಶಕಿಯಾಗಿಯೂ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ.

2006ರಲ್ಲಿ ದೀಪಕ್ ಚಂದ್ರಶೇಖರ್ ಜೊತೆ ಹೊಸ ಬದುಕಿಗೆ ಕಾಲಿಟ್ಟವರು ಅಲ್ಲಿಯೂ ಹೆಚ್ಚು ದಿನ ಉಳಿಯಲಿಲ್ಲ. ಮದುವೆಯಾದ ಕೇವಲ ನಾಲ್ಕೇ ನಾಲ್ಕು ವರ್ಷಕ್ಕೆ ಅವರಿಂದ ದೂರವಾದರು. ಎರಡು ವರ್ಷಗಳ ಹಿಂದೆಯಷ್ಟೇ ಚಿತ್ರೋದ್ಯಮಕ್ಕೆ ಗುಡ್ ಬೈ ಹೇಳಿದ್ದರು. ನಂತರ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

ಆನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡು, ಪಕ್ಷ ಕಟ್ಟಲು ಮುಂದಾದರು. ಪಕ್ಷದ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ನಂತರ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಲೆ ಆರೋಪ ಮಾಡಿ ರಾಜೀನಾಮೆ ಕೂಡ ನೀಡಿದ್ದರು.

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

7 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago