ಚಿತ್ರ ಮಂಜರಿ

ಗೀತಾ ಶಿವರಾಜ್ ಕುಮಾರ್ ಲೋಕಸಭೆ ಟಿಕೆಟ್ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು: ಮಧು ಬಂಗಾರಪ್ಪ

ತೀರ್ಥಹಳ್ಳಿ:  ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ  ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲು ಗೀತಾ ಅವರಿಗೆ ಪಕ್ಷದ ಹಿರಿಯರು ಸೂಚನೆ ನೀಡಿದ್ದಾರೆ. ಗೀತಕ್ಕ ಪಕ್ಷಕ್ಕೆ ಸೇರಿದ್ದಾರೆ. ಚುನಾವಣೆ ಸ್ಫರ್ಧೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಅದನ್ನೆಲ್ಲಾ ನಾನು ಮಾತಾಡಲ್ಲ, ತಪ್ಪಾಗುತ್ತೇ ಎಂದರು.

ನನಗೆ ಸಿಕ್ಕಿರುವ ಶಿಕ್ಷಣ ಇಲಾಖೆ ದೊಡ್ಡದು, ಸಾಕಷ್ಟು ಸಮಸ್ಯೆಗಳು ಕೂಡ ಇವೆ. ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ. ಎಲ್ಲವನ್ನು ಬಗೆಹರಿಸುತ್ತವೆ. ಇಲಾಖೆಗೆ ಸಂಬಂಧಿಸಿದ ಅನುದಾನಕ್ಕೆ ಬಜೆಟ್ ಅಲ್ಲಿ ಸೇರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಪ್ರಕರಣ ಕೋರ್ಟ್ ನಲ್ಲಿದೆ. ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ಕಮಿಟಿ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಕ್ಕಳ ಶೂ ಸಾಕ್ಸ್ ಗೆ ಅನುದಾನ ಕಡಿಮೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನುದಾನ ಮೊದಲೇ ಬಿಡುಗಡೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಅನುದಾನ ಕೊಡಲಿದ್ದೇವೆ. ಗಂಡುಮಕ್ಕಳಿಗೂ ಸೈಕಲ್ ಕೊಡಲು ಪ್ರಸ್ತಾವ ಬಜೆಟ್‌ನಲ್ಲಿ ಸೇರಿಸಲು ಚರ್ಚಿಸಿದ್ದೇವೆ. ಎಷ್ಟು ಆಗುತ್ತೊ ಅಷ್ಟು ಮಾಡಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago