ತೀರ್ಥಹಳ್ಳಿ: ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲು ಗೀತಾ ಅವರಿಗೆ ಪಕ್ಷದ ಹಿರಿಯರು ಸೂಚನೆ ನೀಡಿದ್ದಾರೆ. ಗೀತಕ್ಕ ಪಕ್ಷಕ್ಕೆ ಸೇರಿದ್ದಾರೆ. ಚುನಾವಣೆ ಸ್ಫರ್ಧೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಅದನ್ನೆಲ್ಲಾ ನಾನು ಮಾತಾಡಲ್ಲ, ತಪ್ಪಾಗುತ್ತೇ ಎಂದರು.
ನನಗೆ ಸಿಕ್ಕಿರುವ ಶಿಕ್ಷಣ ಇಲಾಖೆ ದೊಡ್ಡದು, ಸಾಕಷ್ಟು ಸಮಸ್ಯೆಗಳು ಕೂಡ ಇವೆ. ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ. ಎಲ್ಲವನ್ನು ಬಗೆಹರಿಸುತ್ತವೆ. ಇಲಾಖೆಗೆ ಸಂಬಂಧಿಸಿದ ಅನುದಾನಕ್ಕೆ ಬಜೆಟ್ ಅಲ್ಲಿ ಸೇರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಪ್ರಕರಣ ಕೋರ್ಟ್ ನಲ್ಲಿದೆ. ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ಕಮಿಟಿ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಕ್ಕಳ ಶೂ ಸಾಕ್ಸ್ ಗೆ ಅನುದಾನ ಕಡಿಮೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನುದಾನ ಮೊದಲೇ ಬಿಡುಗಡೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಅನುದಾನ ಕೊಡಲಿದ್ದೇವೆ. ಗಂಡುಮಕ್ಕಳಿಗೂ ಸೈಕಲ್ ಕೊಡಲು ಪ್ರಸ್ತಾವ ಬಜೆಟ್ನಲ್ಲಿ ಸೇರಿಸಲು ಚರ್ಚಿಸಿದ್ದೇವೆ. ಎಷ್ಟು ಆಗುತ್ತೊ ಅಷ್ಟು ಮಾಡಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…