ತೀರ್ಥಹಳ್ಳಿ: ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಲು ಗೀತಾ ಅವರಿಗೆ ಪಕ್ಷದ ಹಿರಿಯರು ಸೂಚನೆ ನೀಡಿದ್ದಾರೆ. ಗೀತಕ್ಕ ಪಕ್ಷಕ್ಕೆ ಸೇರಿದ್ದಾರೆ. ಚುನಾವಣೆ ಸ್ಫರ್ಧೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಅದನ್ನೆಲ್ಲಾ ನಾನು ಮಾತಾಡಲ್ಲ, ತಪ್ಪಾಗುತ್ತೇ ಎಂದರು.
ನನಗೆ ಸಿಕ್ಕಿರುವ ಶಿಕ್ಷಣ ಇಲಾಖೆ ದೊಡ್ಡದು, ಸಾಕಷ್ಟು ಸಮಸ್ಯೆಗಳು ಕೂಡ ಇವೆ. ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ. ಎಲ್ಲವನ್ನು ಬಗೆಹರಿಸುತ್ತವೆ. ಇಲಾಖೆಗೆ ಸಂಬಂಧಿಸಿದ ಅನುದಾನಕ್ಕೆ ಬಜೆಟ್ ಅಲ್ಲಿ ಸೇರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಪ್ರಕರಣ ಕೋರ್ಟ್ ನಲ್ಲಿದೆ. ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ಕಮಿಟಿ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಕ್ಕಳ ಶೂ ಸಾಕ್ಸ್ ಗೆ ಅನುದಾನ ಕಡಿಮೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನುದಾನ ಮೊದಲೇ ಬಿಡುಗಡೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಅನುದಾನ ಕೊಡಲಿದ್ದೇವೆ. ಗಂಡುಮಕ್ಕಳಿಗೂ ಸೈಕಲ್ ಕೊಡಲು ಪ್ರಸ್ತಾವ ಬಜೆಟ್ನಲ್ಲಿ ಸೇರಿಸಲು ಚರ್ಚಿಸಿದ್ದೇವೆ. ಎಷ್ಟು ಆಗುತ್ತೊ ಅಷ್ಟು ಮಾಡಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…