ಚಿತ್ರ ಮಂಜರಿ

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ!

ಲಾಸ್‌ ಏಂಜಲೀಸ್‌(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ​ಎಸ್.​ಎಸ್.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್​​ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್​ಆರ್​ಆರ್​ 2022ರ ದಕ್ಷಿಣ ಚಿತ್ರರಂಗದ ಸೂಪರ್​ ಹಿಟ್ ಸಿನಿಮಾ ಆಗಿತ್ತು. ಭಾರತ ಮಾತ್ರವಲ್ಲ, ವಿದೇಶದ ಥಿಯೇಟರ್​ಗಳಲ್ಲಿಯೂ ಧೂಳೆಬ್ಬಿಸಿತ್ತು.ದಕ್ಷಿಣ ಭಾರತದ ಸಿನಿಮೋದ್ಯಮದ ಜನಪ್ರಿಯ ತಾರೆಯರಾದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅತ್ಯದ್ಭುತ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್‌ ನೀಡಿದ್ದರು. 1,200 ಕೊಟಿ ರೂ.ಗೂ ಅಧಿಕ ಗಳಿಗೆ​ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಬುಧವಾರ ವರ್ಣರಂಜಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜಮೌಳಿ, ರಾಮ್​ಚರಣ್​​​ ಮತ್ತು ಜೂನಿಯರ್​ ಎನ್​ಟಿಆರ್​ ಸೇರಿದಂತೆ ಅವರ ಕುಟುಂಬಸ್ಥರು, ಚಿತ್ರತಂಡದ ಕೆಲವರು ಭಾಗಿಯಾಗಿದ್ದರು. ಚಿತ್ರದ ಮೂವರು ಪ್ರಮುಖರು ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖರ ಫೋಟೋಗಳೀಗ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಸದ್ದು ಮಾಡುತ್ತಿವೆ. ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago