ಚಿತ್ರ ಮಂಜರಿ

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ!

ಲಾಸ್‌ ಏಂಜಲೀಸ್‌(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ​ಎಸ್.​ಎಸ್.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್​​ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್​ಆರ್​ಆರ್​ 2022ರ ದಕ್ಷಿಣ ಚಿತ್ರರಂಗದ ಸೂಪರ್​ ಹಿಟ್ ಸಿನಿಮಾ ಆಗಿತ್ತು. ಭಾರತ ಮಾತ್ರವಲ್ಲ, ವಿದೇಶದ ಥಿಯೇಟರ್​ಗಳಲ್ಲಿಯೂ ಧೂಳೆಬ್ಬಿಸಿತ್ತು.ದಕ್ಷಿಣ ಭಾರತದ ಸಿನಿಮೋದ್ಯಮದ ಜನಪ್ರಿಯ ತಾರೆಯರಾದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅತ್ಯದ್ಭುತ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್‌ ನೀಡಿದ್ದರು. 1,200 ಕೊಟಿ ರೂ.ಗೂ ಅಧಿಕ ಗಳಿಗೆ​ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಬುಧವಾರ ವರ್ಣರಂಜಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜಮೌಳಿ, ರಾಮ್​ಚರಣ್​​​ ಮತ್ತು ಜೂನಿಯರ್​ ಎನ್​ಟಿಆರ್​ ಸೇರಿದಂತೆ ಅವರ ಕುಟುಂಬಸ್ಥರು, ಚಿತ್ರತಂಡದ ಕೆಲವರು ಭಾಗಿಯಾಗಿದ್ದರು. ಚಿತ್ರದ ಮೂವರು ಪ್ರಮುಖರು ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖರ ಫೋಟೋಗಳೀಗ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಸದ್ದು ಮಾಡುತ್ತಿವೆ. ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

30 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago