ಲಾಸ್ ಏಂಜಲೀಸ್(ಯುಎಸ್ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್ಆರ್ಆರ್ 2022ರ ದಕ್ಷಿಣ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ ಆಗಿತ್ತು. ಭಾರತ ಮಾತ್ರವಲ್ಲ, ವಿದೇಶದ ಥಿಯೇಟರ್ಗಳಲ್ಲಿಯೂ ಧೂಳೆಬ್ಬಿಸಿತ್ತು.ದಕ್ಷಿಣ ಭಾರತದ ಸಿನಿಮೋದ್ಯಮದ ಜನಪ್ರಿಯ ತಾರೆಯರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅತ್ಯದ್ಭುತ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ನೀಡಿದ್ದರು. 1,200 ಕೊಟಿ ರೂ.ಗೂ ಅಧಿಕ ಗಳಿಗೆ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್ ಎಂಟ್ರಿ: ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಬುಧವಾರ ವರ್ಣರಂಜಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜಮೌಳಿ, ರಾಮ್ಚರಣ್ ಮತ್ತು ಜೂನಿಯರ್ ಎನ್ಟಿಆರ್ ಸೇರಿದಂತೆ ಅವರ ಕುಟುಂಬಸ್ಥರು, ಚಿತ್ರತಂಡದ ಕೆಲವರು ಭಾಗಿಯಾಗಿದ್ದರು. ಚಿತ್ರದ ಮೂವರು ಪ್ರಮುಖರು ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖರ ಫೋಟೋಗಳೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…