ಚಿತ್ರ ಮಂಜರಿ

ಅಲ್ಲು ಅಭಿಮಾನಿಗಳಿಗೆ ಸಿಹಿ ಸುದ್ದಿ : ಪುಷ್ಪ-೨ ಟೀಸರ್‌ ಬಿಡುಗಡೆ ಡೇಟ್‌ ಫಿಕ್ಸ್‌ !

ಬೆಗಳೂರು: ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪುಷ್ಪ 2 ಸಿನಿಮಾದ ಹೊಸ ಅಪ್‌ಡೇಟ್‌ ಹೊರಬಿದ್ದಿದೆ. ಏಪ್ರಿಲ್‌ 8ರಂದು ಪುಷ್ಪಾ 2 ಟೀಸರ್‌ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಅಲ್ಲು ಅರ್ಜುನ್‌ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆಯಾಗಲಿದೆ.

ಈ ಕುರಿತಾದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಪುಷ್ಪಾ 2 ಸಿನಿಮಾವು ಆಗಸ್ಟ್‌ 15, 2024ರಂದು ಬಿಡುಗಡೆಯಾಗಲಿದೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸುವ ಈ ಸಿನಿಮಾಕ್ಕೆ ಸುಕುಮಾರ್‌ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

“ಪುಷ್ಪ ಸಾಮೂಹಿಕ ಜಾತ್ರೆ ಶುರು ಮಾಡೋಣ. ಬಹು ನಿರೀಕ್ಷಿತ ಪುಷ್ಪ 2 ದಿ ರೂಲ್ ಟೀಸರ್ ಏಪ್ರಿಲ್ 8 ರಂದು ಬಿಡುಗಡೆಯಾಗಲಿದೆ. ಬೆಂಕಿಯನ್ನು ದ್ವಿಗುಣಗೊಳಿಸಲು ಬರುತ್ತಿದ್ದಾರೆ” ಎಂದು ಮೈತ್ರಿ ಮೂವೀ ಮೇಕರ್ಸ್ ಟ್ವೀಟ್ ಮಾಡಿದೆ. ಆಗಸ್ಟ್ 15 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಇದೇ ಸಮಯದಲ್ಲಿ ಚಿತ್ರತಂಡ ಸ್ಪಷ್ಟಪಡಿಸಿದೆ.

ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನದಂದೇ ಟೀಸರ್ ಬಿಡುಗಡೆಯಾಗುವುದು ಅಲ್ಲು ಅಭಿಮಾನಿಗಳಿಗೆ ಡಬಲ್‌ ಖುಷಿ ತಂದಿದೆ. ಚಿತ್ರತಂಡವು ಪುಷ್ಪಾ 2 ಟೀಸರ್ ದಿನಾಂಕದ ಪೋಸ್ಟರ್ ಅನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್‌ ಅವರ ಕಾಲು ಮಾತ್ರ ಕಾಣಿಸುತ್ತದೆ. ಹಿಂಬದಿಯಲ್ಲಿ ದೀಪಗಳು ಉರಿಯುತ್ತಿವೆ. ಪುಷ್ಪ ಮಾಸ ಜಾತ್ರೆ ಆರಂಭವಾಗುತ್ತಿದ್ದಂತೆಯೇ ಈ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

9 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

9 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago