ಚಿತ್ರ ಮಂಜರಿ

ಅಲ್ಲು ಅಭಿಮಾನಿಗಳಿಗೆ ಸಿಹಿ ಸುದ್ದಿ : ಪುಷ್ಪ-೨ ಟೀಸರ್‌ ಬಿಡುಗಡೆ ಡೇಟ್‌ ಫಿಕ್ಸ್‌ !

ಬೆಗಳೂರು: ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪುಷ್ಪ 2 ಸಿನಿಮಾದ ಹೊಸ ಅಪ್‌ಡೇಟ್‌ ಹೊರಬಿದ್ದಿದೆ. ಏಪ್ರಿಲ್‌ 8ರಂದು ಪುಷ್ಪಾ 2 ಟೀಸರ್‌ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಅಲ್ಲು ಅರ್ಜುನ್‌ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆಯಾಗಲಿದೆ.

ಈ ಕುರಿತಾದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಪುಷ್ಪಾ 2 ಸಿನಿಮಾವು ಆಗಸ್ಟ್‌ 15, 2024ರಂದು ಬಿಡುಗಡೆಯಾಗಲಿದೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸುವ ಈ ಸಿನಿಮಾಕ್ಕೆ ಸುಕುಮಾರ್‌ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

“ಪುಷ್ಪ ಸಾಮೂಹಿಕ ಜಾತ್ರೆ ಶುರು ಮಾಡೋಣ. ಬಹು ನಿರೀಕ್ಷಿತ ಪುಷ್ಪ 2 ದಿ ರೂಲ್ ಟೀಸರ್ ಏಪ್ರಿಲ್ 8 ರಂದು ಬಿಡುಗಡೆಯಾಗಲಿದೆ. ಬೆಂಕಿಯನ್ನು ದ್ವಿಗುಣಗೊಳಿಸಲು ಬರುತ್ತಿದ್ದಾರೆ” ಎಂದು ಮೈತ್ರಿ ಮೂವೀ ಮೇಕರ್ಸ್ ಟ್ವೀಟ್ ಮಾಡಿದೆ. ಆಗಸ್ಟ್ 15 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಇದೇ ಸಮಯದಲ್ಲಿ ಚಿತ್ರತಂಡ ಸ್ಪಷ್ಟಪಡಿಸಿದೆ.

ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನದಂದೇ ಟೀಸರ್ ಬಿಡುಗಡೆಯಾಗುವುದು ಅಲ್ಲು ಅಭಿಮಾನಿಗಳಿಗೆ ಡಬಲ್‌ ಖುಷಿ ತಂದಿದೆ. ಚಿತ್ರತಂಡವು ಪುಷ್ಪಾ 2 ಟೀಸರ್ ದಿನಾಂಕದ ಪೋಸ್ಟರ್ ಅನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್‌ ಅವರ ಕಾಲು ಮಾತ್ರ ಕಾಣಿಸುತ್ತದೆ. ಹಿಂಬದಿಯಲ್ಲಿ ದೀಪಗಳು ಉರಿಯುತ್ತಿವೆ. ಪುಷ್ಪ ಮಾಸ ಜಾತ್ರೆ ಆರಂಭವಾಗುತ್ತಿದ್ದಂತೆಯೇ ಈ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

22 seconds ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

49 mins ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

56 mins ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

8 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

8 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

8 hours ago