ಚಿತ್ರ ಮಂಜರಿ

ನಟಿ ಶ್ರೀದೇವಿ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ

ಭಾರತೀಯ ಚಿತ್ರರಂಗದ ಸ್ಟಾರ್ ನಟಿ ಶ್ರೀದೇವಿ ಅವರ 60ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಎವರ್‌ಗ್ರೀನ್ ನಾಯಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಅಕಾಲಿಕ ಮರಣ ಹೊಂದಿರೋ ಹಿರಿಯ ನಟಿಯ ಹುಟ್ಟುಹಬ್ಬಕ್ಕೆ ಗೂಗಲ್ ವಿಶೇಷವಾಗಿ ಶುಭ ಕೋರಿದೆ.

ಬಾಲಿವುಡ್‌ನ ದಿವಂಗತ ನಟಿ ಶ್ರೀದೇವಿ ಅವರ 60ನೇ ಜನ್ಮದಿನ ಗೂಗಲ್ ವಿಶೇಷ ಡೂಡಲ್ ಗೌರವ ಸಲ್ಲಿಸಿದೆ. 1963ರಲ್ಲಿ ತಮಿಳುನಾಡಿನಲ್ಲಿ ಜನಿಸಿದ ಶ್ರೀದೇವಿ ತಮ್ಮ ವೃತ್ತಿಜೀವನದ ನಾಲ್ಕು ದಶಕಗಳ ಅವಧಿಯಲ್ಲಿ ಸುಮಾರು ಮುನ್ನೂರು ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.ನಿರ್ಮಾಪಕ ಬೋನಿ ಕಪೂರ್ ಅವರನ್ನು ವರಿಸಿದ್ದ ಈ ಚೆಲುವೆಗೆ ಜಾನ್ವಿ ಮತ್ತು ಖುಷಿ ಕಪೂರ್ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಗೆದ್ದು ಬೀಗಿದ್ದಾರೆ. ಇಂದಿಗೂ ಅವರ ಹಿಂದಿನ ಸಿನಿಮಾಗಳನ್ನ ನೋಡಿ ಖುಷಿ ಪಡುವ ಅಭಿಮಾನಿಗಳಿದ್ದಾರೆ. ಶ್ರೀದೇವಿ ಅವರ ನಟನೆಯನ್ನು ಸ್ಪೂರ್ತಿಯಾಗಿಟ್ಟುಕೊಂಡು ಹಲವು ನಟಿಯರು ಅವರ ಹಾದಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಪುತ್ರಿಯರಾದ ಜಾನ್ವಿ- ಖುಷಿ ಕಪೂರ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಳ್ತಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಹೆಣ್ಣು ಸಂಸಾರದ ಕಣ್ಣು, ಬಾಲ ಭಾರತ, ಯಶೋಧ ಕೃಷ್ಣ, ಪ್ರಿಯಾ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಒಟ್ಟು ಕನ್ನಡದ 5 ಸಿನಿಮಾದಲ್ಲಿ ಶ್ರೀದೇವಿ ನಟಿಸಿದ್ದರು.

lokesh

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

9 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

10 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

10 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago